ಬೆಂಗಳೂರು : ವಿಮಾನದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.
ಇಂದು ಮಸ್ಕಟ್ ನಗರದಿಂದ ಬೆಂಗಳೂರಿಗೆ ಆಗಮಿಸಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಕರೆ ಬಂದಿದ್ದು, ವಿಮಾನದಲ್ಲಿ ತೀವ್ರ ತಪಾಸಣೆ ನಡೆಸಲಾಗ್ತಿದೆ.
ನಿಲ್ದಾಣದಲ್ಲಿರುವ ಜನ ಸೇರಿ ಸಿಬ್ಬಂದಿಗಳು ಆತಂಕದಲ್ಲಿದ್ದು, ತಪಾಸಣೆ ಕಾರ್ಯಾಚರಣೆ ಮುಂದುವರೆದಿದೆ.