Saturday, May 11, 2024
spot_img
More

    Latest Posts

    ಬಂಟ್ವಾಳ: ಸಿಡಿಲಿನ ಅಘಾತಕ್ಕೆ 16 ವರ್ಷದ ಬಾಲಕ ಬಲಿ

    ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಸಿಡಿಲು-ಮಳೆ ಸುರಿದಿದ್ದು , ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ.

    ಸಾಣೂರುಪದವು ಗಣೇಶ್ ಆದಿ ದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿಯಾಗಿದ್ದಾನೆ. ರಾತ್ರಿ ಮನೆಯಲ್ಲಿ ಎಲ್ಲರೂ 9ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ.

    ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದಾರೆ. ಅದರೆ ಬಾಲಕ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಕೈಕಂಬದ ಕ್ಲಿನಿಕ್ ಗೆ ಕರೆತರಲಾಗಿದೆ. ಬಳಿಕ ಹೆಚ್ಚಿ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss