ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕ ದುರ್ಮರಣಕ್ಕೀಡಾಗಿ ಆತನ ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಬೆಂದೂರುವೆಲ್ನಲ್ಲಿ ನಡೆದಿದೆ. ಹಾರ್ದಿಕ್(7) ಮೃತಪಟ್ಟ ಬಾಲಕ. ಗಾಯಾಳು ತಾಯಿ ಸ್ವಾತಿ ಎಂದು ಗುರುತಿಸಲಾಗಿದೆ. ಸ್ವಾತಿ ಪುತ್ರನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಖಾಸಗಿ ಬಸ್ ನಿರ್ಲಕ್ಷ್ಯದಿಂದ ಸಂಚರಿಸಿಕೊಂಡು ಬಂದ ಪರಿಣಾಮ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟರ್ ರಸ್ತೆಗೆ ಬಿದ್ದಿದೆ. ಈ ವೇಳೆ ರಸ್ತೆಗೆ ಬಿದ್ದ ಬಾಲಕ ಹಾರ್ದಿಕ್ ಮೇಲೆಯೇ ಬಸ್ ಹರಿದು ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತಾಯಿ ಸ್ವಾತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದರಿಂದ ದುರ್ಘಟನೆ ಸಂಭವಿಸಿದೆ.
©2021 Tulunada Surya | Developed by CuriousLabs