ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಸುಳ್ಯ :ಮಹಿಳಾ ದಿನಾಚರಣೆ – ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಹಿಳಾ ಸಬಲೀಕರಣ ಅಗತ್ಯ : ಎಂ. ಬಿ. ಸದಾಶಿವ
- ಅತೀ ವೇಗದ ಓಟದಲ್ಲಿ ಇತಿಹಾಸ ರಚಿಸಿದ 80 ಬಡಗಬೆಟ್ಟು ಕೋಣಗಳು – ಕಂಬಳದಲ್ಲಿ ಸಾರ್ವಕಾಲಿಕ ದಾಖಲೆ
- ಸಸಿಹಿತ್ಲು ಭಗವತಿಗೆ ‘ಸ್ವರ ಸಂಗೀತಾಭಿಷೇಕಂ’ ಕಲಾ ಸೌರಭದಿಂದ ‘ಕಲಾ ಸಂಸ್ಕಾರ – 26’ ಸರಣಿ ಕಾರ್ಯಕ್ರಮ: ಭಾಸ್ಕರ ರೈ ಕುಕ್ಕುವಳ್ಳಿ
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರು ಸಮಾಜದ ಶಕ್ತಿ –ತುಳುನಾಡ ರಕ್ಷಣಾ ವೇದಿಕೆ ಮಹಿಳಾ ನಗರಾದ್ಯಕ್ಷೆ ಆಶಾ ಶೆಟ್ಟಿ ಅತ್ತಾವರ
- ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆ
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
