ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಸುಂದರ ರಾಜ್ ರೈ ರಾಜಧಾನಿಯಲ್ಲಿ ತುಳುವರ ಧ್ವನಿಯಾಗಿದ್ದರು: ನಳೀನ್ ಕುಮಾರ್ ಕಟೀಲ್
- ವೀಸಾ ವಂಚನೆ: ಕಾವೂರು ಪೊಲೀಸರಿಂದ ಇಬ್ಬರ ಬಂಧನ
- ಬಿಎಸ್ಪಿ ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆ ಪೇಜಾವರ ಪೊರ್ಕೋಡಿಯಲ್ಲಿ ಯಶಸ್ವಿ
- ಉಡುಪಿ: ಕಟಪಾಡಿಯ ಕೌಸ್ತುಭ ರೆಸಿಡೆನ್ಸಿ ಕಟ್ಟಡದ ಕೊಳಚೆ ನೀರಿನ ಸರಿಯಾದ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ ಒತ್ತಾಯ
- ಶ್ರೀ ಸುಂದರರಾಜ ರೈ ಅವರ ಶ್ರದ್ಧಾಂಜಲಿ — ಸಭೆ 30 ಅಕ್ಟೋಬರ್, ಉರ್ವ ತುಳು ಭವನ
- ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷರಿಗೆ ಅದ್ದೂರಿ ಸ್ವಾಗತ
- ಉಡುಪಿ: ಪಿಎಂಇಜಿಪಿ ಸಬ್ಸಿಡಿ ಸಾಲದ ಹೆಸರಿನಲ್ಲಿ ಕೋಟ್ಯಾಂತರ ವಂಚನೆ – ಆರೋಪಿ ಮಹಿಳೆ ಸೆರೆ
- ಹಿರಿಯ ನಟ ಸತೀಶ್ ಶಾ (74) ನಿಧನ
