ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ
