ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು
