ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- ಗುರು ಪೌರ್ಣಮಿ
- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ವತಿಯಿಂದ ಕುಂದಾಪುರದ ತ್ರಾಸಿಯಲ್ಲಿ ನಡೆದ ಪತ್ರಿಕಾ ದಿನಾಚಾರಣೆಯ ಕಾರ್ಯಕ್ರಮದಲ್ಲಿ ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರಿಗೆ ಸನ್ಮಾನ
- ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಪ್ರಯತ್ನಿಸುತ್ತಿರುವ ಗ್ರಹ ಮಂತ್ರಿಯವರಿಗೆ ತುಳುನಾಡ ರಕ್ಷಣಾ ವೇದಿಕೆ ಸುಳ್ಯ ಅಧ್ಯಕ್ಷ ಪ್ರಶಾಂತ್ ರೈ ಮರವಂಜ ರಿಂದ ಸನ್ಮಾನಿಸಿದರು.
- ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯ
- ಮಂಗಳೂರು : ಸಿದ್ದಿಕ್ ಪಾಂಡವರ ಕಲ್ಲು ಮದುವೆ ಮಾಡಿಸುವ ನೆಪದಲ್ಲಿ ಹಣ ಸಂಗ್ರಹ ಮಾಡುವುದಲ್ಲದೆ, ಮೊಬೈಲ್ ನಂಬರ್ ಪಡೆದು ಆನೈತಿಕ ಸಂಬಂಧಕ್ಕೆ ಬಳಕೆ : ಅಬ್ದುಲ್ ರವೂಫ್ ಗಂಭೀರ ಆರೋಪ…!
- ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್.ಡಾ.ಎನ್.ಇಸ್ಮಾಯಿಲ್, ಅಕಾಡೆಮಿಯ ನಾಟಕ ಪ್ರದರ್ಶನ ಉದ್ಘಾಟನೆ
- ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಬಳಿಕ ಯುವಕ ಆತ್ಮಹತ್ಯೆ…!!
- ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ:- ಶಾಸಕ ಕಾಮತ್