ಬೆಳ್ತಂಗಡಿ : ಅಡಿಕೆ ವ್ಯಾಪಾರದ ಅಂಗಡಿಗೆ ಸ್ಕೂಟರಿನಲ್ಲಿ ಬಂದ ಅಪರಿಚಿತರು ಕ್ಯಾಶ್ ಡ್ರಾವರಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಎಗರಿಸಿದ ಘಟನೆ ಮಡಂತ್ಯಾರು ಗ್ರಾಮದ ನಾವುಂಡ ಎಂಬಲ್ಲಿ ನಡೆದಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್ ಎಂಬವರಲ್ಲಿ ಕ್ಯಾಷ್ ಡ್ರಾವರ್ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದುತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ. ಮಾಲೀಕರು ಅಂಗಡಿಗೆ ಬಂದು ಕ್ಯಾಶ್ ಡ್ರಾವರ್ ನ್ನು ಪರಿಶೀಲಿಸಿದಾಗ ಡ್ರಾವರ್ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 01/2024 ಕಲಂ: 380 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
