ಪುಣೆ: ಬಂಟ್ಸ್ ಅಸೋಸಿಯೇಷನ್ ಪುಣೆ (ರಿ.) ವತಿಯಿಂದ 14ನೇ ವಾರ್ಷಿಕ ಸಮಾವೇಶವನ್ನು ಫೆಬ್ರವರಿ 6, 2026 (ಶುಕ್ರವಾರ)ರಂದು ಮಧ್ಯಾಹ್ನ 2.30 ಗಂಟೆಯಿಂದ ಪುಣೆಯ ಬಾನೇರ್ನಲ್ಲಿರುವ “ಬಂಟರ ಭವನ”ದಲ್ಲಿ ಆಯೋಜಿಸಲಾಗಿದೆ.

ಮರ್ಸಿಡಿಸ್ ಶೋರೂಮ್ ಸಮೀಪ, ಪುಣೆ–ಬೆಂಗಳೂರು ಹೆದ್ದಾರಿಯ ಬಾನೇರ್ ಪ್ರದೇಶದಲ್ಲಿರುವ ಬಂಟರ ಭವನದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಬಂಟ ಸಮುದಾಯದ ಸದಸ್ಯರು ಹಾಗೂ ಸಾರ್ವಜನಿಕರು ಕುಟುಂಬ ಸಮೇತ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಅಧಿಕೃತ ವಾರ್ಷಿಕ ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ರಾತ್ರಿ 9 ಗಂಟೆಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ಸಮಾವೇಶದ ವಿಶೇಷ ಆಕರ್ಷಣೆಯಾಗಿ ಶ್ರೀ ಶಕ್ತಿ ಸಾಂಸ್ಕೃತಿಕ ತಂಡದ ಆಶ್ರಯದಲ್ಲಿ “ಸಾಮರ್ಥ್ಯ ಕಲಾವೈಭವ” ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಿ, ಶಕ್ತಿ ಹಾಗೂ ಸಂಸ್ಕೃತಿಯ ಸೊಗಡನ್ನು ಒಳಗೊಂಡ ಈ ಕಾರ್ಯಕ್ರಮವು ಪ್ರೇಕ್ಷಕರಿಗೆ ಮನಮುಗ್ಧಗೊಳಿಸುವ ಅನುಭವ ನೀಡಲಿದೆ ಎಂದು ಸಂಘದವರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಬಂಟ್ಸ್ ಅಸೋಸಿಯೇಷನ್ ಪುಣೆ ಅಧ್ಯಕ್ಷರಾದ ಶ್ರೀ ರೋಹಿತ್ ಡಿ. ಶೆಟ್ಟಿ ನಾಗ್ರಿಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದು, ಬಂಟ್ಸ್ ಸಂಘ ಬೆಂಗಳೂರು ಅಧ್ಯಕ್ಷರಾದ ಶ್ರೀ ಸಿ.ಎ. ಅಶೋಕ್ ಶೆಟ್ಟಿ ಎಂ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಟೆಕ್ನೋಥರ್ಮಾ ಗ್ರೂಪ್ ಆಫ್ ಇಂಡಸ್ಟ್ರೀಸ್, ಮುಂಬೈ ನಿರ್ದೇಶಕರಾದ ಶ್ರೀ ನಾಗ್ರಿಗುತ್ತು ವಿವೇಕ್ ಶೆಟ್ಟಿ ಹಾಗೂ ಬಂಟ್ಸ್ ಸಂಘ ಪುಣೆ ಅಧ್ಯಕ್ಷರಾದ ಶ್ರೀ ಅಜಿತ್ ಹೆಗ್ಡೆ ಕೆಂಜಾರ್ಗುತ್ತು ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸಂಘದ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಡಾ. ಸುಧಾಕರ್ ಶೆಟ್ಟಿ ಹಾಗೂ ಶ್ರೀ ಸತೀಶ್ ರೈ ಕಲ್ಲಂಗಲಗುತ್ತು, ಗೌರವ ಕಾರ್ಯದರ್ಶಿಯಾಗಿ ಶ್ರೀ ದಿನೇಶ್ ಶೆಟ್ಟಿ, ಗೌರವ ಖಜಾಂಚಿಯಾಗಿ ಶ್ರೀ ಮನೋಹರ್ ಶೆಟ್ಟಿ (ಸಿ.ಎ.), ಪಿಆರ್ಒ ಆಗಿ ಶ್ರೀ ಪ್ರದೀಪ್ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ರೇಶ್ಮಾ ಆರ್. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಶ್ರೀಮತಿ ಶರ್ಮಿಳಾ ಟಿ. ರೈ ಇದ್ದಾರೆ. ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಶ್ರೀ ಬಾಲಕೃಷ್ಣ ಶೆಟ್ಟಿ ಹಾಗೂ ಯುವ ಘಟಕ ಅಧ್ಯಕ್ಷರಾಗಿ ಶ್ರೀ ಅದೀಪ್ ಶೆಟ್ಟಿ ನೇತೃತ್ವ ವಹಿಸಿದ್ದಾರೆ.
ಈ 14ನೇ ವಾರ್ಷಿಕ ಸಮಾವೇಶವು ಸಂಘಟನೆಯ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುವುದರೊಂದಿಗೆ, ಸಾಂಸ್ಕೃತಿಕ ಏಕತೆಯ ವೇದಿಕೆಯಾಗಲಿದೆ ಎಂದು ಬಂಟ್ಸ್ ಅಸೋಸಿಯೇಷನ್ ಪುಣೆ ಪ್ರಕಟಣೆಯಲ್ಲಿ ತಿಳಿಸಿದೆ.




