ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಬದಿಗಳಲ್ಲಿ ಮತ್ತು ವಿದ್ಯುತ್ ಕಂಬಗಳಲ್ಲಿ ಪರವಾನಗಿ ಪಡೆಯದೇ ಕೇಬಲ್ ವಯರ್ ಗಳನ್ನು ಅಳವಡಿಸಿದ್ದರೆ ಎಲ್ಲವನ್ನೂ ತೆರವು ಮಾಡಬೇಕೆಂದು ಪಾಲಿಕೆ ಸೂಚಿಸಿದೆ. ಮಹಾನಗರ ಪಾಲಿಕೆಯ ಅನುಮತಿ ಪಡೆದು ಕೇಬಲ್ ವಯರ್ ಅಳವಡಿಸಿಕೊಂಡಿದ್ದರೆ ಈ ಕೂಡಲೇ ಉಪ ಆಯುಕ್ತರು ಅಥವಾ ಕಂದಾಯ ಅಧಿಕಾರಿಗೆ ಪರವಾನಗಿಯನ್ನು ಪರಿಶೀಲನೆಗೆ ನೀಡಬೇಕು. ಪಾಲಿಕೆಯ ವ್ಯಾಪ್ತಿಯಲ್ಲಿನ ರಸ್ತೆಗಳ ಬದಿಯಲ್ಲಿ ಮಣ್ಣಿನ ಒಳಗೆ ಕೇಬಲ್ ವಯರ್ ಗಳನ್ನು ಅನುಮತಿ ಪಡೆಯದೆ ಅಳವಡಿಸಿಕೊಂಡಿದ್ದರೆ ಅವನ್ನೆಲ್ಲ ನಿರ್ದಾಕ್ಷಿಣ್ಯವಾಗಿ ಪಾಲಿಕೆಯೇ ತೆಗೆದು ಹಾಕಿ ದಂಡ ವಿಧಿಸಲಾಗುವುದು ಎಂದು ಪಾಲಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Trending
- ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಅನಿಲ ಕೊರತೆ ನೀಗಿಸುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ಆಗ್ರಹ.
- ಚೇತನ್ ಯೋಗಿಶ್ ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿ ಜನತಾದಳ(ಜಾ) ಸಭೆಯಲ್ಲಿ ಸೇರ್ಪಡೆ
- ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಸಾವು
- ಮಂಗಳೂರು : ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧದ ಆರೋಪಗಳು ಸುಳ್ಳು — ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ
- ಕೇರಳ, ತಮಿಳುನಾಡು, ಪಾಂಡಿಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆ: 90ಕ್ಕೂ ಹೆಚ್ಚು ನಾಯಕರು ನಿಯೋಜನೆ
- ಉಡುಪಿ : ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಪ್ರಶಾಂತ್ ಜತ್ತನ್ನ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷ ಪದಗ್ರಹಣದ ಬಳಿಕ ಹಿರಿಯ ನಾಯಕರನ್ನು ಭೇಟಿ ಮಾಡಿದ ನಿಹಾಲ್ ಎಸ್ ಕೋಡ್ತುಗುಳಿ
- ನಾಳೆ ಮಾರ್ಚ್ 20 ರಂದು ಈದುಲ್ ಫಿತ್ರ್ (ಶವ್ವಾಲ್ 1) ಆಚರಣೆ — ಉಡುಪಿಯಲ್ಲಿ ಚಂದ್ರದರ್ಶನ ದೃಢೀಕರಣ
