Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂಗಳನ್ನು ಖಾಲಿ ಬಿಟ್ಟ ದಂಪತಿ! ಜಾತಿ ರಹಿತ ಪ್ರಮಾಣ ಪತ್ರ ನೋಡಿ ಶಾಕ್ ಅಧಿಕಾರಿಗಳು .!

    ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಮೂಲದ ದಂಪತಿ ತಮ್ಮ ಮೂರೂವರೆ ವರ್ಷದ ಮಗಳನ್ನು ಯಾವುದೇ ಧಾರ್ಮಿಕ ಸಂಬಂಧವಿಲ್ಲದ ಹಾಗೂ ಜಾತಿ ರಹಿತ ಎಂದು ಗುರುತಿಸುವ ನಿರ್ಧಾರ ಮಾಡಿದ್ದಾರೆ.

    ಕೊಯಮತ್ತೂರಿನಲ್ಲಿ ಸಣ್ಣ ಡಿಸೈನಿಂಗ್​ ಸಂಸ್ಥೆ ನಡೆಸುವ ನರೇಶ್​ ಕಾರ್ತಿಕ್​, ತಮ್ಮ ಮಗಳನ್ನು ಶಾಲೆಗೆ ಸೇರಿಸಲು ಅರ್ಜಿ ಭರ್ತಿ ಮಾಡುವಾಗ ಜಾತಿ ಮತ್ತು ಧರ್ಮದ ಕಾಲಂ ಅನ್ನು ಖಾಲಿ ಬಿಡುತ್ತಿದ್ದರು. ಇದೇ ಕಾರಣಕ್ಕೆ ಎಲ್ಲ ಶಾಲೆಗಳಲ್ಲಿ ಅವರ ಅರ್ಜಿಯನ್ನು ಕಾಯ್ದಿರಿಸುತ್ತಿದ್ದರು. ಇದರಿಂದ ಒಂದು ನಿರ್ಧಾರಕ್ಕೆ ಬಂದ ಕಾರ್ತಿಕ್​, ಉತ್ತರ ಕೊಯಮತ್ತೂರಿನ ತಾಲೂಕು ಕಚೇರಿಯಿಂದ ಧರ್ಮ ಮತ್ತು ಜಾತಿ ರಹಿತ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ಮಗು ಜಿ.ಎನ್​. ವಿಲ್ಮ ಯಾವುದೇ ಧರ್ಮ ಮತ್ತು ಜಾತಿಗೆ ಸೇರಿದವಳಲ್ಲ ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖವಾಗಿದೆ.

    1973 ಮತ್ತು 2000 ಇಸವಿಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಶಾಲಾ ಅರ್ಜಿಯಲ್ಲಿ ಜಾತಿ ಮತ್ತು ಧರ್ಮದ ಕಾಲಂಗಳನ್ನು ಖಾಲಿ ಬಿಡಲು ಅನುವು ಮಾಡಿಕೊಡಲಾಗಿದೆ. ಆದರೆ, ಶಾಲೆಯ ಅಧಿಕಾರಿಗಳಿಗೆ ಈ ಬಗ್ಗೆ ಯಾವುದೇ ಜ್ಞಾನವಿಲ್ಲ ಎಂದು ಕಾರ್ತಿಕ್​ ಕಿಡಿಕಾರಿದ್ದಾರೆ. ನಾನು ಶಾಲಾ ಆಡಳಿತ ಮಂಡಳಿಗೆ ಸರ್ಕಾರದ ಆದೇಶ ಪ್ರತಿಯ ನಕಲುಗಳನ್ನು ತೋರಿಸಿದಾಗ ಅಧಿಕಾರಿಗಳು ಗೊಂದಲಕ್ಕೆ ಒಳಗಾದರು. ವಿವಿಧ ಸಮುದಾಯಗಳಿಂದ ಶಾಲಾ ದಾಖಲಾತಿಗಳು ಮತ್ತು ಶಾಲೆ ಬಿಟ್ಟವರ ಅಂಕಿ-ಅಂಶಗಳಿಗಾಗಿ ಸರ್ಕಾರಕ್ಕೆ ವಿವರಗಳನ್ನು ಒದಗಿಸಬೇಕಾಗಿರುವುದರಿಂದ ಕಾಲಂ ಭರ್ತಿ ಮಾಡಲೇಬೇಕು ಎಂದು ಒತ್ತಾಯಿಸಿದರು.

    ನನ್ನನ್ನು ಅಂಕಿ-ಅಂಶಗಳಿಂದ ಹೊರಗಿಡಲು ಅಥವಾ ನಮ್ಮಂತಹ ಜನರಿಗೆ ಪ್ರತ್ಯೇಕ ವರ್ಗವನ್ನು ರಚಿಸಲು ಕೇಳಿದಾಗ, ನಿರಾಕರಿಸಿದರು. ಇದೇ ಕಾರಣದಿಂದ ನನ್ನ ಮಗುವಿಗೆ ಜಾತಿ ಮತ್ತು ಧರ್ಮ ರಹಿತ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದೇನೆಂದು ಕಾರ್ತಿಕ್​ ಹೇಳಿದರು. ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವ ಮೊದಲು ಕಾರ್ತಿಕ್​, ಕುತೂಹಲದಿಂದ ತನ್ನ ಮಗಳ ಪ್ರವೇಶಕ್ಕಾಗಿ ಇಪ್ಪತ್ತೆರಡು ಖಾಸಗಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ್ದರು. ಪ್ರತಿಯೊಂದು ಶಾಲೆ ಕೂಡ ಜಾತಿ ಮತ್ತು ಧರ್ಮದ ಕಾಲಂಗಳು ಖಾಲಿ ಇವೆ ಎಂದು ಉಲ್ಲೇಖಿಸಿ ಅರ್ಜಿಯನ್ನು ಕಾಯ್ದಿರಿಸಿದ್ದರು.

    ನನ್ನ ಮಗಳನ್ನು ಎಲ್ಲಿಗೆ ಸೇರಿಸಬೇಕೆಂದು ನಾನು ಮೊದಲೇ ನಿರ್ಧರಿಸಿದ್ದೆ, ಆದರೆ ಅರ್ಜಿಗಳಲ್ಲಿ ಜಾತಿ-ಧರ್ಮ ಕಾಲಂಗಳನ್ನು ಖಾಲಿ ಬಿಟ್ಟರೆ ಏನಾಗುತ್ತದೆ ಎಂದು ನೋಡಲು ಹೀಗೆ ಮಾಡಿದೆ. ಆದರೆ, ಸರ್ಕಾರದ ಆದೇಶ ಇರುವುದು ಯಾರಿಗೂ ತಿಳಿದಿಲ್ಲ. ಒಬ್ಬರ ಜಾತಿ ಅಥವಾ ಧರ್ಮವನ್ನು ಘೋಷಿಸದಿರಲು ಆಯ್ಕೆ ಮಾಡುವ ನಿಬಂಧನೆ ಇರುವುದರ ಬಗ್ಗೆ ಶಾಲೆಗಳಿಗೆ ತಿಳಿದಿಲ್ಲದಿರುವುದು ದುರದೃಷ್ಟಕರ ಸಂಗತಿ ಎಂದು ಕಾರ್ತಿಕ್​ ಹೇಳಿದರು.

    ಇದು ಶಾಲೆಯ ಅಧಿಕಾರಿಗಳ ತಪ್ಪಲ್ಲ. ನಮ್ಮ ಶಿಕ್ಷಣ ವ್ಯವಸ್ಥೆಯಿಂದಾಗಿ ಇಂತಹ ನಿಬಂಧನೆಗಳ ಅಸ್ತಿತ್ವವು ಜನರಿಗೆ ತಿಳಿದಿಲ್ಲ. ಆದರೆ, ಇದು ಒಂದು ಶಿಕ್ಷಣ ಕೂಡ ಹೌದು. ಎಲ್ಲರಿಗು ಇದು ತಿಳಿದಿರಬೇಕೆಂದು ಕಾರ್ತಿಕ್​ ಹೇಳಿದರು. ಅಲ್ಲದೆ, ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ. ನಾನು ಎಲ್ಲ ಧರ್ಮಗಳ ಪವಿತ್ರ ಪುಸ್ತಕಗಳನ್ನು ಓದುತ್ತೇನೆ. ಜಾತಿ ಎನ್ನುವುದು ಧರ್ಮದ ಉತ್ಪನ್ನವಾಗಿದೆ ಎಂದಿದ್ದಾರೆ.

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    Don't Miss

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

    ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

    ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

    ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

    ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

    BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

    ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...