Monday, December 4, 2023

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...
More

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮಂಗಳೂರು : ರಾಜ್ಯದಲ್ಲಿ ಮೊದಲ ಬಾರಿಗೆ ಕ್ಯಾಟ್​ವಾಕ್ ಮಾಡಿ ಕಿರೀಟ ಗೆದ್ದ ಡಾಕ್ಟರ್​ಗಳು

    ಮಂಗಳೂರು : ಡಾಕ್ಟರ್​ಗಳು ರೋಗಿಗಳ ಚಿಕಿತ್ಸೆ ಅಥವಾ ಕುಟುಂಬದ ಕಡೆ ಗಮನ ಕೊಡುವುದನ್ನು ಬಿಟ್ಟು ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಕಡಿಮೆ. ಅದರಲ್ಲೂ ಮಹಿಳಾ ವೈದ್ಯರಿಗಂತೂ ರೋಗಿಗಳಿಗೆ ಮತ್ತು ಕುಟುಂಬಕ್ಕೆ ಸಮಯ ಕೊಡುವುದರಲ್ಲಿಯೇ ಟೈಮ್​ ಕಳೆದುಹೋಗುತ್ತದೆ. ಇಂತಹ ಬ್ಯುಸಿ ಶೆಡ್ಯೂಲ್ ಹೊಂದಿರುವ ಮಹಿಳಾ ವೈದ್ಯರು ಫ್ಯಾಷನ್ ಶೋನಲ್ಲಿ ಭಾಗವಹಿಸಿ ಕ್ಯಾಟ್​ವಾಕ್ ಮೂಲಕ ಗಮನ ಸೆಳೆದರು.

    ಮಂಗಳೂರಿನ ಐಎಂಎ ಸಭಾಂಗಣದಲ್ಲಿ ಮಹಿಳಾ ವೈದ್ಯರ ಫ್ಯಾಷನ್ ಶೋ ಆಯೋಜಿಸಲಾಗಿತ್ತು. ಮಂಗಳೂರಿನ ಪಾತ್ ವೇ ಎಂಟರ್ ಪ್ರೈಸಸ್ ಹಾಗೂ ವಿಮೆನ್ ಡಾಕ್ಟರ್ ವಿಂಗ್ ಇದರ ಸಹಯೋಗದಲ್ಲಿ ಮೆಡಿಕ್ವೆಸ್ಟ್ ಹೆಲ್ತ್ ಕೇರ್ ಪ್ರಾಯೋಜಕತ್ವದಲ್ಲಿ ಡಾಕ್ಟರ್ ಫ್ಯಾಷನ್ ರ‌್ಯಾಂಪ್ 2023 ಅನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ವಿಮೆನ್ ಡಾಕ್ಟರ್ ವಿಂಗ್​ನ ಅಧ್ಯಕ್ಷೆ ಡಾ. ಜೆಸ್ಸಿ ಅವರು ಇತ್ತೀಚೆಗೆ ನಡೆದಿದ್ದ ಫ್ಯಾಷನ್ ಶೋ ವೊಂದರಲ್ಲಿ ಕಿರೀಟ ಮುಡಿಗೇರಿಸಿದ್ದರು.‌ ಈ ಉತ್ಸಾಹದಿಂದ ಅವರು ಮಂಗಳೂರಿನಲ್ಲಿ ಮಹಿಳಾ ವೈದ್ಯರುಗಳಿಗೆ ಫ್ಯಾಷನ್ ಶೋ ಆಯೋಜಿಸಲು ಮುಂದಾದರು. ಮಂಗಳೂರಿನಲ್ಲಿ ನಡೆದ ಈ ಫ್ಯಾಷನ್ ಶೋ ಕಾರ್ಯಕ್ರಮ ರಾಜ್ಯದಲ್ಲೇ ಮೊದಲ ಬಾರಿಗೆ ನಡೆದ ವೈದ್ಯರ ಫ್ಯಾಷನ್ ಶೋ ಆಗಿದ್ದು, ರಾಜ್ಯಮಟ್ಟದಲ್ಲಿ ಮತ್ತೆ ಸಮಾರಂಭ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ.

    ಮಂಗಳೂರಿನಲ್ಲಿ ಭಾನುವಾರ ನಡೆದ ಡಾಕ್ಟರ್ ಫ್ಯಾಷನ್ ಶೋನಲ್ಲಿ 20 ಮಂದಿ ಮಹಿಳಾ ವೈದ್ಯರು ಭಾಗವಹಿಸಿದ್ದರು. 20 ರಿಂದ 40 ವಯಸ್ಸಿನೊಳಗಿನ, 40 ರಿಂದ 60 ವಯಸ್ಸಿನೊಳಗಿನ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ವಿಭಾಗವನ್ನು ಮಾಡಲಾಗಿತ್ತು. 60 ವರ್ಷ ಮೇಲ್ಪಟ್ಟ ವಯಸ್ಸಿನ ವಿಭಾಗದಲ್ಲಿ 5 ಮಂದಿ ಪಾಲ್ಗೊಂಡಿದ್ದು, ಇದರಲ್ಲಿ 68 ವರ್ಷ ವಯಸ್ಸಿನ ಡಾ. ಚಿತ್ರಲೇಖಾ ಶ್ರೀಯಾನ್ (ಪ್ರಸೂತಿ ತಜ್ಞೆ) ಕಿರೀಟ ಮುಡಿಗೇರಿಸಿಕೊಂಡರು. 40 ರಿಂದ 60 ವರ್ಷ ವಯಸ್ಸಿನ ವಿಭಾಗದಲ್ಲಿ 3 ಮಂದಿ‌ ಭಾಗವಹಿಸಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯ ಡಿಪಾರ್ಟ್​ಮೆಂಟ್ ಅಫ್ ಮೆಡಿಸಿನ್ ಪ್ರೊಫೆಸರ್ ಹಾಗೂ ಮೇರಿಹಿಲ್​ನ ಅತರ್ವ ಸ್ಪೆಷಾಲಿಟಿ ಕ್ಲಿನಿಕ್​ನ ಡಾ. ಅರ್ಚನ ಭಟ್ ಕಿರೀಟ ಮುಡಿಗೇರಿಸಿಕೊಂಡರು. 20 ರಿಂದ 40 ವರ್ಷದ ವಯಸ್ಸಿನ ವಿಭಾಗದಲ್ಲಿ 12 ಮಂದಿ ಭಾಗವಹಿಸಿದ್ದು, ಎಜೆ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ನಿಶಿತಾ ಶೆಟ್ಟಿಯಾನ್ ಫರ್ನಾಂಡಿಸ್ ಕಿರೀಟ ಮುಡಿಗೇರಿಸಿಕೊಂಡರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆಯೋಜಕ ಪಾತ್ ವೇ ಎಂಟರ್ ಪ್ರೈಸಸ್​ನ ದೀಪಕ್ ಗಂಗೂಲಿ “ವೈದ್ಯರುಗಳ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ ಎಂದು ನಿರೀಕ್ಷೆಯೆ ಮಾಡಿರಲಿಲ್ಲ. 20 ಮಂದಿ ವೈದ್ಯರುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. 60 ವರ್ಷ ಮೇಲ್ಪಟ್ಟ ವಿಭಾಗದಲ್ಲಿ 5 ಮಂದಿ ಭಾಗವಹಿಸಿರುವುದೇ ವಿಶೇಷ. ವಿಮೆನ್ ಡಾಕ್ಟರ್ ವಿಂಗ್ ನಿಂದ ಡಾಕ್ಟರ್ ಫ್ಯಾಷನ್ ಶೋವನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸಲು ಬೇಡಿಕೆ ಬಂದಿದೆ” ಎಂದರು.

    20 ರಿಂದ 40 ವರ್ಷದ ವಿಭಾಗದಲ್ಲಿ ಕಿರೀಟ ಮುಡಿಗೇರಿಸಿಕೊಂಡ ಡಾ. ನಿಶಿತಾ ಶೆಟ್ಟಿಯಾನ್ ಫರ್ನಾಂಡಿಸ್ ಮಾತನಾಡಿ, “ಕಿರೀಟ ಗೆದ್ದಿರುವುದು ತುಂಬಾ ಸಂತಸ ನೀಡಿದೆ. ರ‌್ಯಾಂಪ್ ವಾಕ್ ಮಾಡಿ ಗೆಲ್ಲುತ್ತೇನೆ ಎಂದು ಆಲೋಚಿಸಿರಲಿಲ್ಲ. ಫ್ಯಾಷನ್ ರ‌್ಯಾಂಪ್​ನಲ್ಲಿ ಭಾಗವಹಿಸಬೇಕೆಂಬುದು ನನ್ನ ಕನಸಾಗಿತ್ತು. ಡಾಕ್ಟರ್ ಆದ ನಂತರ ಕೆಲಸ, ಕುಟುಂಬ ಎಂದು ಸಮಯ ಸಿಕ್ಕಿರಲಿಲ್ಲ. ಈ ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು. ಈ ಹಿಂದೆ ಯಾವತ್ತೂ ಫ್ಯಾಷನ್ ಶೋನಲ್ಲಿ ಭಾಗಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಭಾಗವಹಿಸಿ ಕಿರೀಟ ಗೆದ್ದೆ ಎಂದು ಸಂತಸ ವ್ಯಕ್ತಪಡಿಸಿದರು. 40 ರಿಂದ 60 ವರ್ಷ ವಯಸ್ಸಿನ ವಿಭಾಗದಲ್ಲಿ ಕಿರೀಟ ಗೆದ್ದ ಡಾ. ಅರ್ಚನ ಭಟ್ ಮಾತನಾಡಿ, “ನನಗೆ ತುಂಬಾ ಖುಷಿಯಾಗಿದೆ. ಕಷ್ಟವಾದ ಸ್ಪರ್ಧೆಯಲ್ಲಿ ಗೆದ್ದು ಬಂದಿದ್ದೇನೆ. ಇಂತಹ ಒಂದು ಅವಕಾಶ ವೈದ್ಯರುಗಳಿಗೆ ಕೊಟ್ಟಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ನಮ್ಮ ಕೆಲಸ ಬದಿಗಿರಿಸಿ ಫ್ಯಾಷನ್ ಶೋದಲ್ಲಿ ಭಾಗವಹಿಸಿದಾಗ ಸಿಗುವ ಸಂಭ್ರಮವೇ ಬೇರೆ. ಇದೊಂದು ನಮ್ಮನ್ನು ಬೇರೊಂದು ಲೋಕಕ್ಕೆ ‌ಕರೆದುಕೊಂಡು ಹೋಗಿದೆ ಎಂದರು.

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    Don't Miss

    ಪ್ರಯಾಣಿಕರು, ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್

    ಮಂಗಳೂರು: ಸರಕಾರಿ ಬಸ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು,...

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...