Saturday, July 27, 2024
spot_img
More

    Latest Posts

    ಪುಂಜಾಲಕಟ್ಟೆ: ನೈನಾಡು ಬಳಿ ಕರುವನ್ನು ಕೊಂದು ತಿಂದ ಚಿರತೆ

    ಪುಂಜಾಲಕಟ್ಟೆ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ.

    ನೈನಾಡು ವಿಠಲ ಶೆಟ್ಟಿ ಎಂಬವರ ಮನೆಯ ಸುಮಾರು 6 ತಿಂಗಳು ಕರುವನ್ನು ಚಿರತೆ ಕೊಂದು ಅರ್ಧ ತಿಂದು ಹಾಕಿದೆ.ಮನೆಯ ಸಮೀಪದಲ್ಲಿರುವ ಹಟ್ಟಿಯ ಹೊರಗಡೆ ಈ ಒಂದು ಕರುವನ್ನು ಕಟ್ಟಿಹಾಕಲಾಗಿತ್ತು. ಮಧ್ಯರಾತ್ರಿ ವೇಳೆ ಚಿರತೆ ಕರುವನ್ನು ಕೊಂಡುಹೋಗಿರಬಹುದು ಎಂದು ಶಂಕಿಸಲಾಗಿದೆ. ನಾಯಿಗಳು ಬೊಗಳಿದೆಯಾದರು ಚಿರತೆ ಬಂದು ಈ ತರಹ ಮಾಡಬಹುದು ಎಂಬುದು ತಿಳಿದಿರಲಿಲ್ಲ ಎಂದು ಮನೆಯವರು ಹೇಳುತ್ತಾರೆ‌.ಯಾಕೆಂದರೆ ಈವರೆಗೆ ಪರಿಸರದಲ್ಲಿ ಚಿರತೆ ದಾಳಿ ಬಗ್ಗೆ ತಿಳಿದಿಲ್ಲ. ಹಾಗಾಗಿ ನಾಯಿಗಳು ಅಷ್ಟು ಜೋರಾಗಿ ಬೊಗಳಿದರೂ ಇಂತಹ ಯೋಚನೆ ಬಂದಿರಲಿಲ್ಲ.ಹಟ್ಟಿಯಿಂದ ಸುಮಾರು 50 ಮೀ.ದೂರದ ಅಡಿಕೆ ತೋಟಕ್ಕೆ ಕರುವನ್ನು ಎಳೆದುಕೊಂಡು ಹೋಗಿ ಕೊಂದು‌‌ಬಳಿಕ ತಿಂದಿದೆ.ಘಟನೆಯ ಬಗ್ಗೆ ಅರಣ್ಯ ಇಲಾಖೆ ಹಾಗೂ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss