Thursday, March 28, 2024
spot_img
More

    Latest Posts

    ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್ ಹಾಗೂ KSRTC ಬಸ್ ಮುಖಾಮುಖಿ ಡಿಕ್ಕಿ

    ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ  ಸಂಭವಿಸಿದೆ.

    ಸಿಂದನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ಎದುರು ಬದುರಾಗಿ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss