ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಇಂಟರ್ ಸಿಟಿ ಲಾಡ್ಜ್ ಹೋಟೆಲ್ ನಲ್ಲಿ ವ್ಯಕ್ತಿಯೋರ್ವರು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು 3 ದಿನಗಳ ಹಿಂದೆ ಇಂಟರ್ ಸಿಟಿ ಲಾಡ್ಜ್ ಹೋಟೆಲ್ನ ರೂಂ ನಲ್ಲಿ ತಂಗಿದ್ದಾರೆ ಎನ್ನಲಾಗಿದ್ದು, ಬಾಗಿಲು ತೆರೆಯದೇ ಇರುವುದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ವ್ತಕ್ತಿ ಮೃತಪಟ್ಟಿದ್ದು ಕಂಡುಬಂದಿದೆ.
ವ್ಯಕ್ತಿಯ ಆಧಾರ್ ಕಾರ್ಡ್ ಲಭಿಸಿದ್ದು, ಬಂಟ್ವಾಳದ ಗುರುಪ್ರಸಾದ್ (36) ಎಂದು ತಿಳಿದು ಬಂದಿದೆ.
ಇನ್ನು ಗುರುಪ್ರಸಾದ್ ಅವರ ಮೃತದೇಹವು ರಕ್ತ ಸಿಕ್ತವಾಗಿದ್ದು, ಮೈಮೇಲೆ ಗಾಯಗಳಿದ್ದು, ಕೊಲೆಯೇ..? ಅಥವಾ ಇನ್ನಿತರ ಕಾರಣಗಳಿಂದ ಮೃತಪಟ್ಟಿರಬಹುದೇ ಎಂದು ಅನುಮಾನಗಳಿದ್ದು, ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಷ್ಟೇ.
ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.