Tuesday, March 19, 2024
spot_img
More

    Latest Posts

    ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.

    ಕೆಲ ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು.ಇಂದು ಬೆಳಗ್ಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ಸಿಎಂ ನೀಡಿದರು.

    ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್‌ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss