Thursday, April 25, 2024
spot_img
More

    Latest Posts

    ಕಾರ್ಕಳ: ನೇಣಿಗೆ ಶರಣಾದ ಕಾಲೇಜು ಉಪನ್ಯಾಸಕಿ!

    ಕಾರ್ಕಳ: ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆಸಲ್ಲಿಸಿದ್ದ ಮಮತಾ ಶೆಟ್ಟಿ. ಆರ್ (42) ಪೆರ್ವಾಜೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಮೂಲತಃ ತೆಳ್ಳಾರಿನವರಾಗಿದ್ದು, ವಿವಾಹವಾದ ಬಳಿಕ ಪೆರ್ವಾಜೆಯಲ್ಲಿ ವಾಸವಾಗಿದ್ದರು. ಸೋಮವಾರ ಬೆಳಗ್ಗೆ ಅವರು ಮನೆಯ ಫ್ಯಾನ್‌ಗೆ ಚೂಡಿದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಾಲೇಜಿನ ನಾಯಕಿಯಾಗಿ ಎಸ್‌ಎಫ್‌ಐ ಸಂಘಟನೆಯಲ್ಲಿ ಗುರುತಿಸಿ ವಿದ್ಯಾರ್ಥಿ ಚಳುವಳಿಗಳಲ್ಲಿ ಸಕ್ರಿಯಾರಾಗಿದ್ದರು. ಮಧುಮೇಹ ಹಾಗೂ ಮಾನಸಿಕವಾಗಿ ಖಿನ್ನತೆ ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss