ಭಟ್ಕಳ : ಶೀಘ್ರದಲ್ಲೇ ಹತ್ತಾರು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಭಟ್ಕಳದಲ್ಲಿ ಮಾತನಾಡಿದ ಕಟೀಲ್ ‘ ಕಾಂಗ್ರೆಸ್ ಪಕ್ಷ ಜನರ ಮನಸ್ಸಿನಿಂದ ದೂರ ಹೋಗಿದೆ.
ಈ ಬಾರಿ ಕರಾವಳಿ ಕಾಂಗ್ರೆಸ್ ಮುಕ್ತವಾಗುವುದು ಖಚಿತ ಎಂದು ಹೇಳಿದರು. ಶೀಘ್ರದಲ್ಲೇ ಹತ್ತಾರು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ, ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿರುವ ಹಿನ್ನೆಲೆ ಮಂಡ್ಯದಲ್ಲಿ ಬಿಜೆಪಿಗೆ ಭಾರೀ ಜನ ಬೆಂಬಲ ವ್ಯಕ್ತವಾಗಲಿದೆ. ಈ ಬಾರಿ ಮತ್ತೆ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.