ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಶ್ರೀ ಪದ್ಮನಾಭ ದೇವಸ್ಥಾನದ ಕೆರೆಯಲ್ಲಿ ಬಹುಕಾಲದಿಂದ ಇದ್ದ ದೇವರ ಮೊಸಳೆ ಎಂದು ಪ್ರತೀತಿ ಪಡೆದಿದ್ದ ಬಬಿಯಾ ಎಂಬ ಹೆಸರಿನ ಮೊಸಳೆ ಮೃತಪಟ್ಟಿದೆ.
ಸೋಮವಾರ ಮಧ್ಯಾಹ್ನ ಬಬಿಯಾ ಮೊಸಳೆಯ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ದೇವಸ್ಥಾನದ ಹೊರ ಪರಿಸರದಲ್ಲಿ ಮೊಸಳೆಯನ್ನು ಮಣ್ಣು ಮಾಡಲಾಯಿತು. ಬೆಳಿಗ್ಗಿನಿಂದಲೇ ಬಬಿಯಾ ಅಂತಿಮ ದರ್ಶನ ಪಡೆಯಲು ಸಾವಿರಾರು ಜನ ಆಗಮಿಸಿದ್ದರು.