ಚಿಕ್ಕಮಗಳೂರು: ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಸಿ.ಟಿ.ರವಿ ‘ನಾನೂ ಕರಸೇವಕ, ನನ್ನನ್ನು ಬಂಧಿಸಿ’ ಎಂದು ಬರೆದಿರುವ ಭಿತ್ತಿಪತ್ರ ಹಿಡಿದು ಗುರುವಾರ ಚಿಕ್ಕಮಗಳೂರು ನಗರ ಠಾಣೆ ಎದುರು ಏಕಾಂಗಿ ಧರಣಿ ನಡೆಸಿದರು.
ಕೆಲವು ಕಾರ್ಯಕರ್ತರೊಂದಿಗೆ ಆಗಮಿ ಸಿದ ಅವರು ಪೊಲೀಸ್ ಠಾಣೆಯ ಮುಂಭಾಗ ‘ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಭಿತ್ತಿಪತ್ರವನ್ನು ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಠಾಣೆಯ ಗೇಟ್ ಆವರಣದಲ್ಲಿದ್ದ ಕಾರ್ಯಕರ್ತರು ಸಿ.ಟಿ.ರವಿ ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಹೆಚ್ಚುವರಿ ಎಸ್ಪಿ ಕೃಷ್ಣ ಮೂರ್ತಿಯವರು ಸಿ.ಟಿ.ರವಿಯನ್ನು ಪೋಲಿಸ್ ಠಾಣೆ ಒಳಗೆ ಕರೆದುಕೊಂಡು ಹೋದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಾವೂ ಕರ ಸೇವಕರು, ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭ ಬಿಜೆಪಿ ಕಾರ್ಯಕ ರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆಯ ಆವರಣದಿಂದ ಹೊರಗೆ ಕಳಿಸಿದರು.
Trending
- ಅಸಮಾನತೆ ಅಸ್ಪೃಶ್ಯತೆ ವಿರುದ್ಧ ಅಂಬೇಡ್ಕರ್ ಹೋರಾಟ –ತರೀಕೆರೆ ಎನ್ ವೆಂಕಟೇಶ್
- ಬೊಂಡಾಲ ಪ್ರಶಸ್ತಿಗೆ ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಆಯ್ಕೆಫೆಬ್ರವರಿ 20ರಂದು ಪ್ರಶಸ್ತಿ ಪ್ರದಾನ
- ಕಾರ್ಕಳದಲ್ಲಿ ಅಕ್ರಮ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ8 ಮಂದಿ ಬಂಧನ – ಮೂವರು ಪರಾರಿ
- ಮಂಗಳೂರು | ತುಳು ಚಿತ್ರರಂಗ–ರಂಗಭೂಮಿ ಕಲಾವಿದರ ‘ದಶ ಯಾತ್ರೆ’ ಸಂಭ್ರಮಕ್ಕೆ ವೇದಿಕೆ ಸಿದ್ಧ
- ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕರಣಗಳು: ಏಕಾಏಕಿ ಎಫ್ಐಆರ್–ಬಂಧನಕ್ಕೆ ಬ್ರೇಕ್ ರಾಜ್ಯ ಪೊಲೀಸರಿಗೆ ಡಿಜಿಪಿ ಎಂ.ಎ. ಸಲೀಮ್ ಹೊಸ ಮಾರ್ಗಸೂಚಿ
- ದಲಿತ ಮಹಿಳೆಯ ಮೇಲೆ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಮತ್ತು ತುಳುನಾಡ ರಕ್ಷಣಾ ವೇದಿಕೆ ಜಂಟಿ ಪತ್ರಿಕಾಗೋಷ್ಠಿ
- ಸುಂಕದಕಟ್ಟೆ – ನವರಂಗ ಕಾಂಪೌಂಡ್ ಬಳಿ ರಸ್ತೆ–ಚರಂಡಿ ಸಮಸ್ಯೆ: ತಕ್ಷಣ ಕಾಮಗಾರಿ ಆರಂಭಿಸಲು ಎಸ್ ಡಿ ಪಿ ಐ ಮುಖಂಡ ಅಬ್ದುಲ್ ಹಮೀದ್ ಕೊಳಂಬೆ ಆಗ್ರಹ
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
