ಚಿಕ್ಕಮಗಳೂರು: ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಸಿ.ಟಿ.ರವಿ ‘ನಾನೂ ಕರಸೇವಕ, ನನ್ನನ್ನು ಬಂಧಿಸಿ’ ಎಂದು ಬರೆದಿರುವ ಭಿತ್ತಿಪತ್ರ ಹಿಡಿದು ಗುರುವಾರ ಚಿಕ್ಕಮಗಳೂರು ನಗರ ಠಾಣೆ ಎದುರು ಏಕಾಂಗಿ ಧರಣಿ ನಡೆಸಿದರು.
ಕೆಲವು ಕಾರ್ಯಕರ್ತರೊಂದಿಗೆ ಆಗಮಿ ಸಿದ ಅವರು ಪೊಲೀಸ್ ಠಾಣೆಯ ಮುಂಭಾಗ ‘ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಭಿತ್ತಿಪತ್ರವನ್ನು ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಠಾಣೆಯ ಗೇಟ್ ಆವರಣದಲ್ಲಿದ್ದ ಕಾರ್ಯಕರ್ತರು ಸಿ.ಟಿ.ರವಿ ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಹೆಚ್ಚುವರಿ ಎಸ್ಪಿ ಕೃಷ್ಣ ಮೂರ್ತಿಯವರು ಸಿ.ಟಿ.ರವಿಯನ್ನು ಪೋಲಿಸ್ ಠಾಣೆ ಒಳಗೆ ಕರೆದುಕೊಂಡು ಹೋದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಾವೂ ಕರ ಸೇವಕರು, ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭ ಬಿಜೆಪಿ ಕಾರ್ಯಕ ರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆಯ ಆವರಣದಿಂದ ಹೊರಗೆ ಕಳಿಸಿದರು.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು
