Saturday, July 27, 2024
spot_img
More

    Latest Posts

    ಕಾರ್ಕಳ: ಪರಶುರಾಮನ ಪ್ರತಿಮೆಗೆ ಹಾನಿ – ಪ್ರಕರಣ ದಾಖಲು

    ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮರ ಪ್ರತಿಮೆಯ ಪಾದಕ್ಕೆ ಕೆಲವರು ಸುತ್ತಿಗೆಯಿಂದ ಹೊಡೆದು ಹಾನಿಗೈದು, ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿರುವುದಾಗಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಕಾರದ ಅನುದಾನದಿಂದ ನಿರ್ಮಾಣಗೊಂಡ ಬೈಲೂರು ಪರಶುರಾಮ ಥೀಮ್ ಪಾರ್ಕ್‌ಗೆ ಪ್ರಸ್ತುತ ಭೇಟಿ ನೀಡಲು ಯಾರಿಗೂ ಅವಕಾಶವಿರುವುದಿಲ್ಲ. ಇಲ್ಲಿಗೆ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ ನಂತರ ಅಕ್ಟೋಬರ್ 19ರಂದು ಕೆಲವರು ಪರಶುರಾಮರ ಪಾದಕ್ಕೆ ಸುತ್ತಿಗೆಯಿಂದ ಹೊಡೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದೆ ಎಂದು ದಿವ್ಯಾ ನಾಯಕ್ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss