ಧಾರವಾಡ, ಜುಲೈ 19: ಧಾರವಾಡ ಜಿಲ್ಲೆಯ ಅಳ್ನಾವರ ಸಮೀಪದ ಕಸ್ತೂರಬಾ ಬಾಲಕಿಯರ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥಗೊಂಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು 10 ರಿಂದ 15 ನಿಮಿಷಗಳಿಗೊಮ್ಮೆ ಒದ್ದಾಡುವುದು, ಚೀರಾಡುವುದು ಹಾಗೂ ಅಸಹಜವಾಗಿ ವರ್ತಿಸುವಂತಹ ಲಕ್ಷಣಗಳನ್ನು ತೋರಿಸುತ್ತಿದ್ದು, ಪೋಷಕರು ಮತ್ತು ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಪ್ರಾಥಮಿಕ ವೈದ್ಯಕೀಯ ಮಾಹಿತಿಯ ಪ್ರಕಾರ, ವೈರಲ್ ಜ್ವರದ ಹಿನ್ನೆಲೆಯಲ್ಲೇ ಈ ಲಕ್ಷಣಗಳು ಕಾಣಿಸಿಕೊಂಡಿರುವ ಸಾಧ್ಯತೆ ಇದ್ದು, ಇನ್ಫ್ಲೂಯೆನ್ಸಾ A ಮತ್ತು B ಸೋಂಕು ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸೋಂಕಿತ ವಿದ್ಯಾರ್ಥಿನಿಯರ ಪೈಕಿ 8 ಮಂದಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಕೆಲ ವಿದ್ಯಾರ್ಥಿನಿಯರಿಗೆ ಅಳ್ನಾವರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಆಸ್ಪತ್ರೆಯಲ್ಲಿಯೂ ವಿದ್ಯಾರ್ಥಿನಿಯರು ಒದ್ದಾಡುವುದು ಹಾಗೂ ಚೀರಾಡುತ್ತಿರುವ ದೃಶ್ಯಗಳು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ. ಮಕ್ಕಳ ಆರೋಗ್ಯದ ಬಗ್ಗೆ ನಿಖರ ಮಾಹಿತಿ ನೀಡುವಂತೆ ಪೋಷಕರು ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.
ಘಟನೆಯ ಬೆನ್ನಲ್ಲೇ ವಸತಿ ನಿಲಯದ ವಾರ್ಡನ್ ನಿರ್ಲಕ್ಷ್ಯದಿಂದ ಸೋಂಕು ಹೆಚ್ಚಿನ ಮಕ್ಕಳಿಗೆ ಹರಡಿರಬಹುದು ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರ ಆರೋಗ್ಯ ಸಮಸ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ವೈದ್ಯಕೀಯ ಪರೀಕ್ಷೆಗಳು ಮತ್ತು ಮಾದರಿ ಸಂಗ್ರಹ ಕಾರ್ಯ ಮುಂದುವರಿದಿದೆ.
ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿರುವ ಅಧಿಕಾರಿಗಳು, ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಗಳ ವರದಿ ಬಂದ ಬಳಿಕವೇ ಅಸ್ವಸ್ಥತೆಗೆ ನಿಖರ ಕಾರಣ ಸ್ಪಷ್ಟವಾಗಲಿದೆ.
Trending
- ನಟ ಚೇತನ್ ಅಹಿಂಸಾಗೆ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಆಹ್ವಾನ
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ

