ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದು ಅಲೆಗಳ ಹೊಡೆತಕ್ಕೆ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಆ.19ರ ಶುಕ್ರವಾರ ಮಧ್ಯಾಹ್ನ ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಅಲೆಗಳ ಹೊಡೆತಕ್ಕೆ ನೀರುಪಾಲಾಗಿದ್ದ ಎನ್ನಲಾಗಿದೆ.ಇನ್ನು ಈತ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು, ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದು, ಇಂದು ಆತನ ಮೇಉತದೆಹ ಪತ್ತೆಯಾಗಿದೆ.
©2021 Tulunada Surya | Developed by CuriousLabs