ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿದ್ದು ಮೂರು ದಿನಗಳ ನಂತರ ಆತನ ಮೃತದೇಹ ಇಂದು ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಯುವಕ ಅಶ್ವಿತ್ (19) ಸಮುದ್ರ ಪಾಲಾದ ದುರ್ದೈವಿ.
ಇವರು ಭಾನುವಾರ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನು ತೊಟ್ಟಿಲು ತೂಗುವ ಫಂಕ್ಷನ್ಗೆ ಹೋಗಿದ್ದರು. ಅಲ್ಲಿಂದಲೇ ಅಶ್ವಿತ್ ತನ್ನ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಿನಲ್ಲಿ ಆಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದರು. ಆದರೆ ಒಟ್ಟಿಗಿದ್ದ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.