ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಸೀಬೆ ಹಣ್ಣು ಕೀಳಲು ಮರ ಹತ್ತಿ ಕೆಳಗಡೆ ಬಿದ್ದು ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ದೋಳ್ಪಾಡಿ ಮರಕ್ಕಡ ಮನೆಯ ನಿವಾಸಿ ದಿವಾಕರ ಗೌಡರವರ ಪುತ್ರ ಉಲ್ಲಾಸ್ ಡಿ.ಎಂ (8) ಮೃತ ಬಾಲಕ.
ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ಉಲ್ಲಾಸ್, ಪ್ರತಿಭಾನ್ವಿತ ವಿದ್ಯಾರ್ಥಿ. ಈತ ಎಂದಿನಂತೆ ನಿನ್ನೆ ಕೂಡ ಶಾಲೆಗೆ ಹೋಗಿದ್ದು, ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಸೀಬೆಹಣ್ಣು ಕೊಯ್ಯಲು ಮರ ಹತ್ತಿದ್ದು, ಈ ವೇಳೆ ಅಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ.
ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.