ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.
ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ, ಶ್ರೀನಿವಾಸ್, ನ್ಯಾನ್ಸಿ ನೋರೋನ್ಹ, ಮೀರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Trending
- ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ 🗞️
- ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ :- ಶಾಸಕ ಕಾಮತ್
- ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು — ಉದ್ಯಮಿ ರೋಶನ್ ಸಲ್ದಾನಾ ಅವರ 2.85 ಕೋಟಿ ರೂ. ಆಸ್ತಿ ಇಡಿ ಮುಟ್ಟುಗೋಲು
- ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
- “ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
- ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ
- ಐಕ್ಯಂ ವಿಶೇಷ ಮಕ್ಕಳ ಶಾಲೆಯಲ್ಲಿ ದೀಪಾವಳಿ ಆಚರಣೆ
- ಉಮ್ರಾ ಯಾತ್ರೆಗೆ ತೆರಳಿದ ಜರ್ಗುಮ್ ಫೌಂಡೇಶನ್ ಸದಸ್ಯರಿಗೆ ಸನ್ಮಾನ

