ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.
ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ, ಶ್ರೀನಿವಾಸ್, ನ್ಯಾನ್ಸಿ ನೋರೋನ್ಹ, ಮೀರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Trending
- ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ – ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಇಬ್ಬಂದಿ ನೀತಿಗೆ ಜನತಾದಳ (ಜಾತ್ಯತೀತ) ತೀವ್ರ ಖಂಡನೆ
- ಉಡುಪಿ ಜಿಲ್ಲಾಕಚೇರಿ ಆವರಣದಲ್ಲಿ ದುರಂತ – ವಿದ್ಯುತ್ ಸ್ಪರ್ಶದಿಂದ ಗ್ರಾಮ ಸಹಾಯಕ ಸಾವು; ಸರ್ಕಾರದ ನಿರ್ಲಕ್ಷ್ಯಕ್ಕೆ ತೀವ್ರ ಖಂಡನೆ
- ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏಪ್ರಿಲ್ 23 ಮತ್ತು 24 ರಂದು ನಡೆಯಲಿದೆ, ಸಿಇಟಿ ಸುವ್ಯವಸ್ಥಿತ ನಡೆಸಲು ಜಿಲ್ಲಾಧಿಕಾರಿ ಸೂಚನೆ
- ತುಳು ಚಲನಚಿತ್ರ “ದೇವ್ ದಾಸ್ ನ ಲೀಲಾ” ಇದೇ ಏಪ್ರಿಲ್ 24ರಂದು ಕರಾವಳಿಯಾದ್ಯಂತ ತೆರೆಗೆ
- ಮಂಗಳೂರಿನಲ್ಲಿ “ಕೊರಗ್ಲಾ ತನಿಯಾ” ಮತ್ತು “ಕನ” ಚಿತ್ರಗಳಿಗೆ ನಾಳೆ ಮುಹೂರ್ತ
- ಮೇ 28–29: ವಿಶ್ವವಿಖ್ಯಾತ ಮಾತಾ ಅಮೃತಾನಂದಮಯಿ ಅಮ್ಮಮಂಗಳೂರಿಗೆ, ಪೂರ್ವಭಾವಿ ಸಾಮೂಹಿಕ ಪ್ರಾರ್ಥನಾ ಸಭೆ ಹಾಗೂ ಶಿವಶಕ್ತಿ ಹೋಮ”.
- ತ್ರಿಶೂರ್ ಪಟಾಕಿ ದುರಂತ: ಪೂರಂ ಪಟಾಕಿ ಪ್ರದರ್ಶನದ ಬಗ್ಗೆ ಸರ್ಕಾರ ತೀರ್ಮಾನ – 24 ಕ್ಕೆ ಏರಿಕೆ
- ಅಲ್ಪಸಂಖ್ಯಾತರನ್ನ ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ಗಾಗಿ ಉಪಯೋಗಿಸಿಕೊಳ್ಳುತ್ತಿದೆ :ನಿಖಿಲ್ ಕುಮಾರಸ್ವಾಮಿ

