Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    ಬೆಳ್ತಂಗಡಿ: BSNL ನಿವೃತ್ತ ಉದ್ಯೋಗಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶ

    ಬೆಳ್ತಂಗಡಿ: ಹಿರಿಯ ದಲಿತ ನಾಯಕ, ಬಹುಜನ ಚಳವಳಿಯ ನೇತಾರ, ಬಿಎಸ್ಸೆನ್ನೆಲ್‌ ನಿವೃತ್ತ ಉದ್ಯೋಗಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಒಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.

    ಕಳೆದ ಜುಲೈ 6ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ ಪಿ.ಡೀಕಯ್ಯ ಅವರು ಕುಸಿದು ಬಿದ್ದು ತಲೆಗೆ ಗಾಯಗೊಂಡ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಆದರೆ ಎರಡು ದಿನಗಳ ಬಳಿಕ ಅವರು ನಿಧನ ಹೊಂದಿದ್ದರು.

    ಮನೆಯವರ ಒಪ್ಪಿಗೆಯಂತೆ ಅಂಗಾಂಗಗಳ ದಾನ ಮಾಡಿದ ಬಳಿಕ ಜು. 9ರಂದು ಬೌದ್ಧ ಧರ್ಮದ ಪ್ರಕಾರ ತಾಲೂಕಿನ ಕಣಿಯೂರು ಗ್ರಾಮದ ಪೊಯ್ಯದಲ್ಲಿ ದಫ‌ನ ಕಾರ್ಯ ನಡೆದಿತ್ತು.

    ಆ ಬಳಿಕ ಜು. 15ರಂದು ಪಿ. ಡೀಕಯ್ಯ ಅವರ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬೆಳ್ತಂಗಡಿ ಪೋಲಿಸ್‌ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಜು. 18ರಂದು ತಹಶೀಲ್ದಾರ್‌ ಅವರ ನೇತೃತ್ವದಲ್ಲಿ ಶವವನ್ನು ಹೊರತೆಗೆದು ವೈದ್ಯರಿಂದ ಶವ ಪರೀಕ್ಷೆ ಮಾಡಲಾಗಿತ್ತು.

    ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಬೆಳ್ತಂಗಡಿ ಪೋಲಿಸರು ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದರು. ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಒಡಿ ತನಿಖೆಗೆ ಒತ್ತಾಯಿಸಿದ್ದರು. ಇದೀಗ ನ. 4ರಂದು ಘಟನೆಯ ಬಗ್ಗೆ ರಾಜ್ಯ ಸರಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಪ್ರಕರಣದ ದಾಖಲೆಗಳನ್ನು ಸಿಒಡಿ ಇಲಾಖೆಗೆ ಒಪ್ಪಿಸುವಂತೆ ಆದೇಶಿಸಿದೆ.

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    Don't Miss

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

    ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

    ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

    ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

    ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

    BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

    ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...