Saturday, December 9, 2023

ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ‘ಉಚಿತ ತರಬೇತಿ’ಗೆಳಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಮೂಲಕ ವಿವಿಧ ಉಚಿತ ತರಬೇತಿಗಳನ್ನು ಸ್ವ-ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗುತ್ತಿದೆ. ಇದೀಗ ವಿವಿಧ ಕೋರ್ಸ್ ಗಳಿಗೆ ಉಚಿತ ತರಬೇತಿಗಾಗಿ ಅರ್ಜಿಯನ್ನು...
More

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ಬೆಂಗಳೂರು: ರೌಡಿಗಳು ಬೇಕರಿಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ; ಆರೋಪಿಗಳ ಬಂಧನಕ್ಕೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಆಗ್ರಹ

    ಬೆಂಗಳೂರು:ಬೆಂಗಳೂರಿನ ಎಚ್​​ಎಲ್ ಕುಂದನಹಳ್ಳಿ ಗೇಟ್​ ಬಳಿ,ಉದ್ಯೋಗಕ್ಕಾಗಿ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ ರೌಡಿಗಳ ಗುಂಪೊಂದು ಹಲ್ಲೆ ನಡೆಸಿದ್ದು ತುಳುನಾಡ ರಕ್ಷಣಾ ವೇದಿಕೆ ಈ ಘಟನೆಯನ್ನು ಖಂಡಿಸಿದೆ.ಅಲ್ಲದೇ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದೆ.
    ತುಳುನಾಡು ಸೇರಿದಂತೆ ವಿವಿಧ ಭಾಗಗಳ ಯುವಕರು ಕಷ್ಟಪಟ್ಟು ಸಾಲ ಮಾಡಿ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ದೂರದ ಬೆಂಗಳೂರಿಗೆ ಕೆಲಸಕ್ಕೆಂದು ಬಂದರೆ ತಮ್ಮ ಜೀವನವನ್ನೇ ಹಾಳು ಮಾಡುತ್ತಿರುವ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್‌ ಶೆಟ್ಟಿರವರು ಆಗ್ರಹಿಸಿದ್ದು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಗೃಹ ಮಂತ್ರಿಗಳು ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಒತ್ತಾಯಿಸಿದೆ.

    ಘಟನೆ ವಿವರ;

    ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೊಟೇಲ್ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಮೇಲೆ ರೌಡಿಗಳ ಗುಂಪೊಂದು ಹಲ್ಲೆ ನಡೆಸಿದೆ.

    ಹಲ್ಲೆಗೊಳಗಾದ ಯುವಕರನ್ನು ಬೈಂದೂರು ಮೂಲದ ನವೀನ್ ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬ್ರಹ್ಮಲಿಂಗೇಶ್ವರ ಬೇಕರಿ ಬೈಂದೂರಿನ ಯುವಕರು ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ನಾಲ್ಕೈದು ಜನರಿಂದ ಯುವಕರ ಗುಂಪೊಂದು ಬಂದು ಸಿಗರೇಟ್ ಖರೀದಿಸಿ, ಹಣ ಪಾವತಿಸದೆ ಸುಮ್ಮನಾಗಿದ್ದಾರೆ. ಹಣ ಕೊಡಿ ಎಂದು ಅಂಗಡಿಯಾತ ಕೇಳಿದಾಗ ಗುಂಪಿನಲ್ಲಿದ್ದ ಒಬ್ಬ ವ್ಯಕ್ತಿಯೊಬ್ಬ ನಿಮ್ಮ ಓನರ್ ಯಾರು? ಎಲ್ಲಿದ್ದಾನೆ ಎಂದು ಕೇಳಿದ್ದಾನೆ. ಉತ್ತರವಾಗಿ, ಅಂಗಡಿ ಮಾಲೀಕ ಊರಿನಲ್ಲಿ ಇದ್ದಾನೆ ಎಂದಿದ್ದಾನೆ. ಈ ವೇಳೆ ಮತ್ತೊಬ್ಬ ಯುವಕ ಏಕಾಏಕಿ ಅಂಗಡಿಯೊಳಗೆ ನುಗ್ಗಿ, ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಅಂಗಡಿಯೊಳಗಿದ್ದ ಇನ್ನೊಬ್ಬ ಯುವಕ, ತಡೆಯಲು ಬಂದಾಗ ಆತನ ಮೇಲೂ ಹಲ್ಲೆ ಮಾಡಿದ್ದಾರೆ.

    ಇಷ್ಟಾಗುತ್ತಿದ್ದಂತೆ ಯುವಕರ ಗುಂಪು ಅಂಗಡಿಯೊಳಗೆ ನುಗ್ಗಿ, ಅಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ, ಹೆಲ್ಮೆಟ್​ ಮುಂತಾದ ವಸ್ತುಗಳಿಂದ ಥಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಅಂಗಡಿಯಲ್ಲಿದ್ದ ಅಮಾಯಕ ಹುಡುಗರ ಮುಖ ಹಾಗೂ ಹೊಟ್ಟೆಯ ಭಾಗಕ್ಕೆ ಹಲ್ಲೆ ಮಾಡಿದ್ದಾರೆ. ಇವರ ಪುಂಡಾಟಿಕೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬೇಕರಿಯಲ್ಲಿದ್ದ ನವೀನ್ ಹಾಗೂ ಪ್ರಜ್ವಲ್​ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸದ್ಯ ಪುಂಡಾಟಿಕೆ ಮೆರೆದ ಆರೋಪಿಗಳ ಮೇಲೆ ಎಚ್​ಎಎಲ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಬೈಂದೂರು ಯುವಕರಾದ ನವೀನ್ ಹಾಗೂ ಪ್ರಜ್ವಲ್ ಮೇಲೆ ಅನಗತ್ಯವಾಗಿ ಪುಡಿ ರೌಡಿಗಳು ಬೆಂಗಳೂರಿನಲ್ಲಿ ಹಲ್ಲೆ ನಡೆಸಿದ್ದು, ಈ ಬಗ್ಗೆ ಯುವಕರ ಜತೆ ಮಾತನಾಡಿ ವಿವರ ಪಡೆಯಲಾಗಿದೆ. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಬೆಂಗಳೂರು ಪೋಲಿಸ್ ಕಮೀಷನರ್ ಪ್ರತಾಪ್ ರೆಡ್ಡಿ ಅವರ ಜೊತೆ ಮಾತನಾಡಿ, ಹುಡುಗರಿಗೆ ಆದ ಅನ್ಯಾಯದ ಬಗ್ಗೆ ನ್ಯಾಯ ಒದಗಿಸುವಂತೆ ವಿನಂತಿಸಲಾಗಿದೆ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದ್ದಾರೆ.

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    Don't Miss

    2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

    ಬೆಂಗಳೂರು): ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

    ಹಾಗಲಕಾಯಿ ತಿನ್ನುವುದರಿಂದ ಸಿಗಲಿವೆ ಈ ಆರೋಗ್ಯ ಲಾಭಗಳು.!

    ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಲಕಾಯಿ ಅನೇಕ ರೋಗಗಳಿಗೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ (ಹಾಗಲಕಾಯಿಯ...

    ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

    ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು...

    ಮಂಗಳೂರು: ಶಿಶುವನ್ನು ಹತ್ಯೆಗೈದು ಬಾಣಂತಿ ನೇಣಿಗೆ ಶರಣು..!

    ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ...

    ಬೆಂಗಳೂರು: ಮೇಲಾಧಿಕಾರಿಗಳ ಕಿರುಕುಳ-ವೈದ್ಯರು ಆತ್ಮಹತ್ಯೆ..!

    ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯಾಗಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿದೆ. ಮೃತ...