Sunday, July 21, 2024
spot_img
More

    Latest Posts

    ಪೊಲೀಸ್ ಉಪ ಮಹಾನಿರೀಕ್ಷಕ ಆತ್ಮಹತ್ಯೆಗೆ ಶರಣು..!

    ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ)ರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.ಇವರು ಕೊಯಮತ್ತೂರು ವೃತ್ತದ ಡಿಐಜಿಯಾಗಿದ್ದರು. ಸಿ.ವಿಜಯಕುಮಾರ್(45) ಮೃತ ದುರ್ದೈವಿ.

    ಅವರು ಇಂದು ಬೆಳಗ್ಗೆ ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಕೊಯಮತ್ತೂರು ನಗರದ ರೆಡ್ ಫೀಲ್ಡ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣವಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದ್ದು, ಸಾವಿನ ಕುರಿತು ತನಿಖೆ ಮುಂದುವರೆದಿದೆ. ವಿಜಯಕುಮಾರ್ ಅವರು ಇದೇ ಜನವರಿ 6ರಂದು ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss