Saturday, July 27, 2024
spot_img
More

    Latest Posts

    ಡಾ.ವೀರೇಂದ್ರ ಹೆಗ್ಗಡೆ ಕುರಿತು ಅವಹೇಳಕಾರಿ ಪೋಸ್ಟ್ – ದೂರು ದಾಖಲು

    ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹಾಗೂ ಕುಟುಂಬಸ್ಥರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ  ಆರೋಪದಡಿ ಪ್ರಕರಣ ಒಂದು ದಾಖಲಾಗಿದೆ.

    ಹೆಗ್ಗಡೆಯವರ ಬಗ್ಗೆ ಹಾಗೂ ಕುಟುಂಬಸ್ಥರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ಹಾಕಿರುವ ಸುರೇಶ್ ರಾಜ್ ಎಂಬವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣವಾದ ವಾಟ್ಸ್ ಅಪ್ ನಲ್ಲಿ ಈತ ಆಕ್ಷೇಪಾರ್ಹ ಬರಹಗಳನ್ನು ಹಾಕಿರುವುದಾಗಿ ಆರೋಪಿಸಲಾಗಿದೆ.

    ಧರ್ಮಸ್ಥಳದಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡುವಂತೆ ಆಗ್ರಹಿಸಿ ಕರಾವಳಿ ಸೇರಿದಂತೆ ನಾಡಿನಾದ್ಯಂತ ಪ್ರತಿಭಟನೆಗಳು ದಿನೇ ದಿನೇ ತೀವ್ರಗೊಳ್ಳುತ್ತಿದೆ.

    ಮತ್ತೊಂದೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಕೂಡ ಸಭೆಗಳು ಅಲ್ಲಲ್ಲಿ ನಡೆಯತ್ತಿದ್ದು ಕರಾವಳಿ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಿದ್ದು ಯಾವುದೇ ಕ್ಷಣದಲ್ಲಿ ಸ್ಪೋಟಗೊಂಡು ಘರ್ಷಣೆಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss