ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದೆ. 31-12-2023 ರ ಮಧ್ಯಾಹ್ನ ಬೀರುವಿನಲ್ಲಿ ಕಸ್ತೂರಿ ಶೆಟ್ಟಿ 2.05 ಲಕ್ಷ ಹಣ ಇಟ್ಟಿದ್ರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಹಣ ಇರಲಿಲ್ಲ. ಎರಡು ದಿನಗಳ ಕಾಲ ಮನೆಯಲ್ಲೆಲ್ಲ ಹುಡುಕಾಡಿದ್ರೂ ಹಣ ಸಿಕ್ಕಿಲ್ಲ. ಹೀಗಾಗಿ ಜನವರಿ 7ರಂದು ಚಂದ್ರಾ ಲೇಔಟ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀದ್ದಾರೆ. ಕಳೆದ ಆರು ತಿಂಗಳಿಂದ ರತ್ನಮ್ಮ ಎಂಬುವರು ಮನೆ ಕೆಲಸಕ್ಕೆ ಬರ್ತಿದ್ದಾರೆ. ರೂಮ್ಗೆ ರತ್ನಮ್ಮ ಬಿಟ್ಟು ಬೇರೆ ಯಾರೂ ಕೂಡ ಬಂದಿಲ್ಲ. ಮನೆ ಕೆಲಸದಾಕೆ ರತ್ನಮ್ಮಳೇ ಹಣ ಕದ್ದಿರಬಹುದು ಅಂತಾ ಕಸ್ತೂರಿ ದೂರು ನೀಡಿದ್ದಾರೆ. ಸದ್ಯ ಚಂದ್ರಲೇಔಟ್ ಪೊಲೀಸ್ರು ಮನೆ ಕೆಲಸದಾಕೆ ರತ್ನಮ್ಮಳ ವಿಚಾರಣೆ ನಡೆಸುತ್ತಿದ್ದಾರೆ.
Trending
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರು ಸಮಾಜದ ಶಕ್ತಿ –ತುಳುನಾಡ ರಕ್ಷಣಾ ವೇದಿಕೆ ಮಹಿಳಾ ನಗರಾದ್ಯಕ್ಷೆ ಆಶಾ ಶೆಟ್ಟಿ ಅತ್ತಾವರ
- ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆ
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
- ಬಾವುಟ ಗುಡ್ಡ : ಎಪ್ರಿಲ್ 5 ರಂದು ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.)ವತಿಯಿಂದ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆ.
- ಹಾಸನದಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು – ಲಾಡ್ಜ್ ಮೇಲೆ ಪೊಲೀಸರ ದಾಳಿ, ವಿದೇಶಿ ಮಹಿಳೆಯರ ರಕ್ಷಣೆ
- ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ಗೆ ಇಬ್ಬರು ಪ್ರಮುಖ ಮುಖಂಡರ ಸೇರ್ಪಡೆ
