ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಬಗ್ಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಾಗಿದೆ. 31-12-2023 ರ ಮಧ್ಯಾಹ್ನ ಬೀರುವಿನಲ್ಲಿ ಕಸ್ತೂರಿ ಶೆಟ್ಟಿ 2.05 ಲಕ್ಷ ಹಣ ಇಟ್ಟಿದ್ರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಹಣ ಇರಲಿಲ್ಲ. ಎರಡು ದಿನಗಳ ಕಾಲ ಮನೆಯಲ್ಲೆಲ್ಲ ಹುಡುಕಾಡಿದ್ರೂ ಹಣ ಸಿಕ್ಕಿಲ್ಲ. ಹೀಗಾಗಿ ಜನವರಿ 7ರಂದು ಚಂದ್ರಾ ಲೇಔಟ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀದ್ದಾರೆ. ಕಳೆದ ಆರು ತಿಂಗಳಿಂದ ರತ್ನಮ್ಮ ಎಂಬುವರು ಮನೆ ಕೆಲಸಕ್ಕೆ ಬರ್ತಿದ್ದಾರೆ. ರೂಮ್ಗೆ ರತ್ನಮ್ಮ ಬಿಟ್ಟು ಬೇರೆ ಯಾರೂ ಕೂಡ ಬಂದಿಲ್ಲ. ಮನೆ ಕೆಲಸದಾಕೆ ರತ್ನಮ್ಮಳೇ ಹಣ ಕದ್ದಿರಬಹುದು ಅಂತಾ ಕಸ್ತೂರಿ ದೂರು ನೀಡಿದ್ದಾರೆ. ಸದ್ಯ ಚಂದ್ರಲೇಔಟ್ ಪೊಲೀಸ್ರು ಮನೆ ಕೆಲಸದಾಕೆ ರತ್ನಮ್ಮಳ ವಿಚಾರಣೆ ನಡೆಸುತ್ತಿದ್ದಾರೆ.
Trending
- ಬಜಪೆಯಲ್ಲಿ ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ: 153 ಯುನಿಟ್ ರಕ್ತ ಸಂಗ್ರಹ
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ
- ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನಕ್ಕೆ ಜೆಡಿಎಸ್ ಜಿಲ್ಲಾ ಘಟಕದ ತೀವ್ರ ಸಂತಾಪ
- ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ
- ಎ.ಪಿ.ಎಂ.ಸಿ. ಪ್ರಾಂಗಣದಲ್ಲಿನ ಮರಗಳಿಗೆ ರಾಸಾಯನಿಕ ಹಿಂಸೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
- ಮುತ್ತತ್ತಿಯ ಕಾವೇರಿಯಲ್ಲಿ ದುರಂತ: ಒಂದೇ ಕುಟುಂಬದ ಐವರ ಜೀವ ಬಲಿ
- ಲೈಂಗಿಕ ಕಿರುಕುಳ ಆರೋಪಕ್ಕೆ ಬಿಗಿ ಕ್ರಮ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಅಮಾನತು
- ಎಂಸಿಸಿ ಬ್ಯಾಂಕ್ ವ್ಯವಹಾರ ವಹಿವಾಟು ₹1,535 ಕೋಟಿಗೆ ಏರಿಕೆ : ಅಧ್ಯಕ್ಷ ಅನಿಲ್ ಲೋಬೊ
