ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಡಾ.ಮಾಲತಿ ಶೆಟ್ಟಿ ಮಾಣೂರು ರವರಿಗೆ ಪ್ರದಾನ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು . ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಜೆ.ಕೆ ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಿದರು .ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ , ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘದ ಸಂಘಟನೆಯ ಒಕ್ಕೂಟ ಅಧ್ಯಕ್ಷರಾದ ಎಂ .ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದರು . ಕಾರ್ಯಕ್ರಮ ಸಂಯೋಜಕರಾದ ಎಸ್ ಆರ್ ವಿಜಯ ಸಮರ್ಥ ಸ್ವಾಗತಿಸಿದರು. ಶ್ರೀ ಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.
Trending
- ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನಗಳ ಪೊಲೀಸ್ ಕಸ್ಟಡಿ
- ಡಾ.ಮಾಲತಿ ಶೆಟ್ಟಿ ಮಾಣೂರು ರವರಿಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ
- ಮೂಡುಬಿದಿರೆ: ಕ್ವಾರಿ ಕೋರೆಗೆ ಉರುಳಿದ ಲಾರಿ; ಅದೃಷ್ಟವಶಾತ್ ಜೀವಹಾನಿ ಇಲ್ಲ
- ತುಳು ಕೂಟ ಬೆದ್ರಕ್ಕೆ ನೂತನ ಸಾರಥ್ಯ, ಅಧ್ಯಕ್ಷರಾಗಿ ತುಳು ಸಾಹಿತಿ ಜಯಂತಿ ಎಸ್. ಬಂಗೇರ, ಕಾರ್ಯದರ್ಶಿಯಾಗಿ ಚೇತನಾ ಹೆಗ್ಡೆ ಆಯ್ಕೆ
- ಮಂಗಳೂರು ದಕ್ಷಿಣ ಜೆಡಿಎಸ್ ಕ್ಷೇತ್ರದ ಸಭೆ ಪಕ್ಷ ಸಂಘಟನೆ ಬಲಪಡಿಸಲು ಒಗ್ಗಟ್ಟಿನ ಕಾರ್ಯಕ್ಕೆ ಕರೆ
- ಕೋಟಿ ಕೋಟಿ ಹಣದ ವಂಚನೆ ಜಾಲಕ್ಕೆ ಪೊಲೀಸರ ಬೇಟೆ: ದಂಪತಿ ಬಂಧನ,₹2 ಲಕ್ಷದಿಂದ ₹20 ಲಕ್ಷದವರೆಗೆ ಹಣ ಪಡೆದು ವಂಚನೆ ಆರೋಪ | ಡ್ರೈಫ್ರೂಟ್ಸ್–ಅಗರಬತ್ತಿ ಉದ್ಯೋಗದ ಆಮಿಷ | ಹಣವೂ ಇಲ್ಲ, ಕೆಲಸವೂ ಇಲ್ಲ!
- ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮೂವರು ಆರೋಪಿಗಳ ಬಂಧನ ₹2 ಲಕ್ಷಕ್ಕೂ ಅಧಿಕ ಹಣ ವರ್ಗಾವಣೆ ಪತ್ತೆ; ಯುಪಿಸಿಎಲ್ ಗುತ್ತಿಗೆ ವಿವಾದವೇ ಕೊಲೆಗೆ ಪ್ರಮುಖ ಕಾರಣ?
- ಆಗಸ್ಟ್ 9, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜನತಾದಳ ಕಾರ್ಯಕರ್ತರ ಸಭೆ

