Saturday, April 20, 2024
spot_img
More

    Latest Posts

    ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

    ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅನಾದಿ‌ ಕಾಲದಿಂದ ನಡೆದುಕೊಂಡು ಬರುತ್ತಿದ್ದಂತಹ ಮಡೆ ಸ್ನಾನಕ್ಕೆ ನ್ಯಾಯಾಲಯ ನಿಷೇಧ ಹೇರಿದೆ.

    ಕೊರೊನಾ ಮಹಾಮಾರಿ ಹಿನ್ನಲೆ ಕಳೆದ ಎರಡು ವರ್ಷಗಳಿಂದ ಎಡೆಮಡೆಸ್ನಾನ ಆಚರಣೆಯನ್ನು ದೇವಸ್ಥಾನದಲ್ಲಿ ನಿಲ್ಲಿಸಲಾಗಿತ್ತು. ಈ ಬಾರಿ ಮತ್ತೆ ಪ್ರಾರಂಭವಾಗಿದ್ದು. ಇಂದು ಒಟ್ಟು 116 ಭಕ್ತರು ಎಡೆಮಡೆಸ್ನಾನ ನೆರವೇರಿಸಿದ್ದಾರೆ.
    ಎಡೆಮಡೆಸ್ನಾನದಲ್ಲಿ ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ. ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತಾಧಿಗಳು ಉರುಳು ಸೇವೆ ಮಾಡುತ್ತಾರೆ. ಚರ್ಮವ್ಯಾಧಿ ಮತ್ತು ಇತರ ರೋಗಗಳಿದ್ದವರು ಈ ಸೇವೆ ನೆರವೇರಿಸಿದರೆ ರೋಗ ಉಪಶಮನವಾಗುತ್ತೆ ಅನ್ನೋ ನಂಬಿಕೆ ಭಕ್ತರಲ್ಲಿ ಇದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss