Wednesday, October 23, 2024
spot_img
More

    Latest Posts

    ಕಾಸರಗೋಡು: ಮರಳು ಮಾಫಿಯಾದೊಂದಿಗೆ ನಂಟು-7 ಮಂದಿ ಪೊಲೀಸರ ಅಮಾನತು

    ಕಾಸರಗೋಡು:ಮರಳು ಮಾಫಿಯಾದೊಂದಿಗೆ ನಂಟು ಆರೋಪದಲ್ಲಿ ಕಾಸರಗೋಡಿನ ಇಬ್ಬರು ಸೇರಿದಂತೆ ಏಳು ಮಂದಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಿರುವ ಬಗ್ಗೆ ವರದಿಯಾಗಿದೆ. ಕಾಸರಗೋಡು ಚಂದೇರಾ ಪೊಲೀಸ್‌ ಠಾಣೆಯ ಟಿ.ಎಂ. ಅಬ್ದುಲ್‌ ರಶೀದ್‌ ಮತ್ತು ಚೀಮೇನಿ ಠಾಣೆಯ ಬಿ. ಹರಿಕೃಷ್ಣನ್‌, ಗ್ರೇಡ್‌ ಎಸ್‌ಐಗಳಾದ ಕಣ್ಣೂರು ರೂರಲ್‌ನ ಸಿ. ಗೋಕುಲನ್‌, ಕಲ್ಲಿಕೋಟೆ ರೂರಲ್‌ನ ಪಿ. ಜೋಯಿ ಥೋಮಸ್‌, ಸಿವಿಲ್‌ ಪೊಲೀಸ್‌ ಆಫೀಸರ್‌ಗಳಾದ ಪಿ.ಎ. ನಿಸಾರ್‌, ಎಂ.ವೈ. ಶಿಬಿನ್‌ ಮತ್ತು ಪಿ.ಎ. ಶಜೀರ್‌ ಸೇವೆಯಿಂದ ವಜಾಗೊಂಡವರು. ಈ 7 ಮಂದಿ ತ್ರಿಶ್ಯೂರು ಠಾಣೆಯಲ್ಲಿದ್ದಾಗ ಮರಳು ಮಾಫಿಯಾ ದೊಂದಿಗೆ ನಿಕಟ ನಂಟು ಬೆಳೆಸಿ ಅವರಿಗೆ ಅಕ್ರಮ ಮರಳು ಸಾಗಾಟಕ್ಕೆ ಅಗತ್ಯ ಸಹಾಯ ಮಾಡಿರುವ ಆರೋಪ ಕೇಳಿ ಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss