ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- ತುಳು ಕೂಟ (ರಿ.), ಕುಡ್ಲ ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ
- ದಕ್ಷಿಣ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ
- ಮಲ್ಪೆಯಲ್ಲಿ ಚೂರಿ ಇರಿತ: ಹಿಂದೂ ಸಂಘಟನೆ ಮುಖಂಡ ಮಂಜು ಕೊಳ ಮೇಲೆ ಚೂರಿ ಇರಿತ
- ಮಂಗಳೂರು: ಡಿಸೆಂಬರ್ನಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆ -ಐಕಳ ಹರೀಶ್ ಶೆಟ್ಟಿ
- ಮಂಗಳೂರು ಲೋಕೋಪಯೋಗಿ ಇಲಾಖೆಯ ಎಸ್ಡಿಎ ಲಂಚ ಸ್ವೀಕರಿಸುವಾಗ ಕರ್ನಾಟಕ ಲೋಕಾಯುಕ್ತ ಬಲೆಗೆ
- ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಗ್ರಾಮದ ಕ್ರೀಡಾಂಗಣಕ್ಕಾಗಿ ಸರಕಾರಿ ಜಾಗ ಮೀಸಲಿರಿಸುವಂತೆ ಕಾಪು ತುಳುನಾಡ ರಕ್ಷಣಾ ವೇದಿಕೆ ಮನವಿ
- ಹರಿಹರಪುರದಲ್ಲಿ’ಜಾಬಾಲಿ – ನಂದಿನಿ’ ಯಕ್ಷಗಾನ ತಾಳ ಮದ್ದಳೆ
- ಕುಂದಾಪುರ: ಹೊಸಂಗಡಿ ಟ್ರೆಕ್ಕಿಂಗ್ ವೇಳೆ ಕುಂದಾಪುರದ ಮೆಡಿಕಲ್ ಶಾಪ್ನ ಮಾಲಕಿ ನದಿಯಲ್ಲಿ ಮುಳುಗಿ ದುರ್ಮರಣ

