ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

