ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- ಮನೆಗೆ ಬೀಗ ಹಾಕಿ ಹೊರಗಡೆ ಹೋಗ್ತಿದ್ದೀರಾ..? ಇನ್ನು ಚಿಂತೆ ಬೇಡ; ನಿಮ್ಮ ಮನೆಯ ಕಾವಲು ಉಡುಪಿ ಪೊಲೀಸರಿಂದ..!
- ಸುಲ್ತಾನ್ ಬತ್ತೇರಿ–ತಣ್ಣೀರುಬಾವಿಯ ಸೇತುವೆ : ಸೆಪ್ಟೆಂಬರ್ಗೆ ವಾಹನ ಸಂಚಾರ ಆರಂಭ ಸಾಧ್ಯತೆ
- ಅಮಿತ್ ಶಾ ಸಮ್ಮುಖದಲ್ಲಿ ಮಹತ್ವದ ಸಭೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ಮೇ 9 ಪ್ರಮಾಣವಚನ
- ಫಲ್ಗುಣಿ ನದಿಯಲ್ಲಿ ಮೀನುಗಳ ಸಾಮೂಹಿಕ ಸಾವು ಮಳವೂರು–ಕೆಂಜಾರ್ ಪ್ರದೇಶದಲ್ಲಿ ಪರಿಸರ ವಿಷಕಾರಿ ತ್ಯಾಜ್ಯ ಹರಿವು ಶಂಕೆ, ಜನರ ಆಕ್ರೋಶ
- ಪತ್ರಕರ್ತ ಝಕರಿಯ ಮೇಲಿನ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ
- ಜನಸಾಮಾನ್ಯರ ಹೃದಯ ಗೆದ್ದ ವೈದ್ಯಾಧಿಕಾರಿಗೆ ಭಾವಪೂರ್ಣ ಬೀಳ್ಕೊಡುಗೆ ,“ಡಾ. ಪ್ರಭಾ ಎನ್. ಅವರ ಸೇವೆ ಬೆಲೆ ಕಟ್ಟಲಾಗದದ್ದು” : ಫ್ರ್ಯಾಂಕಿ ಡಿಸೋಜ
- ಸುಳ್ಯ ತಾಲೂಕು ಜನತಾದಳ (ಜಾ) ಅಧ್ಯಕ್ಷರ ನಿವಾಸಕ್ಕೆ ಯೋಗಿಶ್ ಶೆಟ್ಟಿ ಜಪ್ಪುರವರ ಸೌಹಾರ್ದ ಭೇಟಿ
- ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತನ ಹತ್ಯೆ ಮಧ್ಯಮಗ್ರಾಮದಲ್ಲಿ ಗುಂಡಿನ ದಾಳಿ; “ಪೂರ್ವಯೋಜಿತ ಕೊಲೆ” ಎಂದು ಆರೋಪ

