ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

