ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ಲಯನ್ ಲೂಯಿಸ್ ಲೋಬೊ ನೇಮಕ
- ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ತೆರವು ಖಂಡನೀಯ: ಜೆಡಿಎಸ್ ಜಿಲ್ಲಾದ್ಯಕ್ಷ ಯೋಗೀಶ್ ವಿ. ಶೆಟ್ಟಿ
- ದೆಹಲಿ ಹೋಟೆಲ್ ಅಗ್ನಿ ಅವಘಡ: 21 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿಯ ರಕ್ಷಣೆ
- ಸುಜಯ್ ಪೂಜಾರಿ ನೇತೃತ್ವದಲ್ಲಿ ಉಡುಪಿಯಲ್ಲಿ ‘ನಮ್ಮ ಕರ್ನಾಟಕ ಸೇನೆ’ ಎಂಬ ಹೊಸ ಕನ್ನಡ ಸಂಘಟನೆಗೆ ಚಾಲನೆ
- ಕರ್ನಾಟಕದ ನೂತನ ಅಧ್ಯಾಯಕ್ಕೆ ಮುನ್ನುಡಿ: ಡಿ.ಕೆ. ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ
- ಬೆಳ್ಮಾರು ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯಗಳ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ
- ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ,ನಾರಾಯಣ ಗುರು ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಶೈಕ್ಷಣಿಕ ಪ್ರೋತ್ಸಾಹ
- ದ್ವೇಷ ಮತ್ತು ವೈಮನಸ್ಸು ಪ್ರಚೋದನೆ ಆರೋಪ: ಯೂಟ್ಯೂಬ್ ವಿಡಿಯೊ ವಿರುದ್ಧ ಪೊಲೀಸ್ ಕ್ರಮ

