ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ಏಕೆ ನಿವೇಶನಕ್ಕೆ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದರೂ ಇದುವರಿಗೂ ಜನರಿಗೆ ಏಕೆ ನಿವೇಶನ ವಿನ್ಯಾಸ ಅನುಮತಿ ಸಿಗದಿದ್ದದ್ದು ಜನರಿಗೆ ತುಂಬಾ ಸಂಕಷ್ಟಕ್ಕೆ ಈಡು ಮಾಡಿದೆ. ಸ್ವಂತ ಮನೆ ನಿರ್ಮಾಣ ಮಾಡುವುದು ಅಸಾಧ್ಯವಾಗಿದ್ದು ಜನರು ಬಾಡಿಗೆ ಮನೆಯಲ್ಲಿ ಆಶ್ರಯಿಸುವಾಂತಾಗಿದೆ. ಈ ಸಮಸ್ಯೆಯನ್ನು ತ್ವರಿತ ಗತಿಯಲ್ಲಿ ಪರಿಹರಿಸಲು ಆದ್ಯತೆ ನೀಡಬೇಕಾಗಿದೆ.
ಕೃಷಿ ವಲಯದಲ್ಲಿ 10 ಸೆನ್ಸ್ ವರೆಗೆ ಏಕ ನಿವೇಶನ ಬರವಣಿಗೆ ನೀಡುವ ಪ್ರಕ್ರಿಯೆಯನ್ನು ನಗರ ಅಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಳಿಸಿದಾರೆ. ಇದರಿಂದ ಜನಸಾಮಾನ್ಯರಿಗೆ ಮನೆ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿದೆ ಈ ಮೊದಲಿನಂತೆ ಇದ್ದ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋದಲ್ಲಿ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಅಲ್ಲದೇ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಬೇಡಿಕೆಗನುಸಾರವಾಗಿ ಸ್ಪಂದಿಸಲು ಸಾಕಷ್ಟು ಪೂರ್ಣ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿವರ್ಗದ ಕೊರತೆ ಇದ್ದು ಜನರ ಸಮಸ್ಯೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲು ಅಗತ್ಯ ಪ್ರಮಾಣದ ಸಿಬ್ಬಂದಿ ಮತ್ತು ಅಧಿಕಾರಿ ವರ್ಗಗಳನ್ನು ನಿಯೋಜಿಸ ಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನಿಯೋಗದಲ್ಲಿ
ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್,
ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ,
ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ
ಮಹಿಳಾ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಕಾರ್ಮಿಕ ಘಟಕ ಜಿಲ್ಲಾ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಮಹಮ್ಮದ್ ಮಜೀದ್, ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ ಉಡುಪಿ ಮತ್ತಿತರರು ಉಪಸ್ಥಿತರಿದ್ದರು
Trending
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು
- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ

