ಪಡುಬಿದ್ರಿ: ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮುಂದೆ ಸಾಗಿ ತೆಂಗಿನ ಮರಕ್ಕೆ ಡಿಕ್ಕಿಯಾಗಿ ಭಾಗಶಃ ಜಖಂಗೊಂಡಿದೆ. ಈ ಘಟನೆ ಪಡುಬಿದ್ರಿ ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಾಯಿತ ಸಂಖ್ಯೆಯ ಕಾರ್ನಲ್ಲಿ ಪ್ರಯಾಣಿಸುತ್ತಿದ್ದವರು ಮಂಗಳೂರು ಎನಪೊಯ ಮೆಡಿಕಲ್ ಆಸ್ಪತ್ರೆಗೆ ಸಂಬಂಧಿಸಿದವರಾಗಿದ್ದಾರೆ. ಕಾರ್ನಲ್ಲಿ ಇಬ್ಬರು ಯುವಕರು ಹಾಗೂ ಮೂವರು ಯುವತಿಯರಿದ್ದರು. ಮಣಿಪಾಲಕ್ಕೆ ಹೋಗಿ ಮಂಗಳೂರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
©2021 Tulunada Surya | Developed by CuriousLabs