ಮಂಗಳೂರು: ಜಿಲ್ಲೆಯ ವಿಶೇಷ ಆರ್ಥಿಕ ವಲಯ ( MSEZ) ನಲ್ಲಿರುವಂತ ಮೀನಿನ ಫ್ಯಾಕ್ಟರಿಯೊಂದರಲ್ಲಿ ನಿನ್ನೆ ರಾತ್ರಿ ತ್ಯಾಜ್ಯ ಟ್ಯಾಂಕರ್ ಶುಚಿಗೊಳಿಸೋ ಸಂದರ್ಭದಲ್ಲಿ ವಿಷಾನಿಸ ಸೇವಿಸಿ, ಮೂವರು ಸಾವನ್ನಪ್ಪಿ, ಐವರು ಸ್ಥಿತಿ ಗಂಭೀರವಾಗಿರೋ ಘಟನೆ ನಡೆದಿರೋದಾಗಿ ತಿಳಿದು ಬಂದಿದೆ.
ಮೂಲಗಳ ಪ್ರಕಾರ ಎಸ್ ಇ ಝಡ್ ವ್ಯಾಪ್ತಿಯಲ್ಲಿರುವಂತ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕರು ಮೀನಿನ ತ್ಯಾಜ್ಯದ ಟ್ಯಾಂಕರ್ ಶುಚಿಗೊಳಿಸಲು ಕೆಳಗೆ ಇಳಿದ ಸಂದರ್ಭದಲ್ಲಿ, ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ರಕ್ಷಿಸಲು ಹೋದಂತ ಮತ್ತೆ 8 ಮಂದಿ ಕೂಡ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಮೂವರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿಯನ್ನು ತಲುಪಿರೋದಾಗಿ ತಿಳಿದು ಬಂದಿದೆ. ಈ ವಿಷಾನಿಲ ದುರಂತದಲ್ಲಿ ಸಾವನ್ನಪ್ಪಿದವರನ್ನು ಪಶ್ಚಿಮ ಬಂಗಾಳದ ಮೂಲಕ ಸಮೀರುಲ್ಲಾ ಇಸ್ಲಾಂ, ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್ ಎಂದು ಗುರುತಿಸಲಾಗಿದೆ. ಮೀನಿನ ಫ್ಯಾಕ್ಟರಿಯಲ್ಲಿ ಈ ದುರಂತ ಸಂಭವಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಂತ ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಝಾನ್ ಅಲಿ, ಕಲೀಮುಲ್ಲಾ ಮತ್ತು ಅಫ್ತರ್ ಮಲಿಕ್ ಎಂಬುವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
