ಮಂಗಳೂರು ನಗರದ ಹೊರವಲಯದಲ್ಲಿರುವ ಎಸ್ ಇಝಡ್ ಮೀನು ಸಂಸ್ಕರಣಾ ಕಾರ್ಖಾನೆಯ ಸೂಪರ್ ವೈಸರ್ ಆಗಿದ್ದ ಮುಂಬೈ ಮೂಲದ ಬಾಲು ಎಂಬಾತನನ್ನು ಪೊಲೀಸರು ಬಂಧಿಸಿದ್ದು ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೇರಿದೆ. ಈ ಕಂಪೆನಿಯ ಮಾಲಕ ರಾಜು ಗೋರಕ್ ಎಂಬಾತ ಪ್ರಕರಣದ ಒಂದನೇ ಆರೋಪಿಯಾಗಿದ್ದು, ಈತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈಗಾಗಲೇ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಸೂಪರ್ ವೈಸರ್ ಮೊಹಮ್ಮದ್ ಅನ್ವರ್ ಮತ್ತು ಕಾರ್ಮಿಕರ ಆಗು ಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಫಾರೂಕ್ ಉಳ್ಳಾಲ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
©2021 Tulunada Surya | Developed by CuriousLabs