Friday, March 29, 2024
spot_img
More

    Latest Posts

    ಉಡುಪಿ: ನಾಲ್ವರು ಅಂತ‌ರ್ ರಾಜ್ಯ ಕಳ್ಳರ ಬಂಧನ

    ಉಡುಪಿ: ಶಿರ್ವ ಹಾಗೂ ಮೂಡಬಿದ್ರಿಯ ಜುವೆಲ್ಲರಿಗಳಲ್ಲಿ ನಡೆದ ಚಿನ್ನಾಭರಣ ಕಳವಿಗೆ ಸಂಬಂಧಿಸಿ ನಾಲ್ವರು ಅಂತ‌ ರಾಜ್ಯ ಕಳವು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

    ತಮಿಳುನಾಡು ರಾಜ್ಯದ ದಿಂಡಿಗಲ್‌ ಜಿಲ್ಲೆಯ ಶನಾಬೆಲ್ಲಾ ಬಿ.(45), ಮುಹಮ್ಮದ್ ಅಲಿ(32), ಅಶು‌ ಅಲಿ(32) ಹಾಗೂ ಗಣೇಶ್ ಕುಮಾರ್ (40) ಬಂಧಿತ ಆರೋಪಿಗಳು.ಬಂಧಿತರಿಂದ 1.49 ಲಕ್ಷ ರೂ. ಮೌಲ್ಯದ 28.882 ಗ್ರಾಂ ತೂಕದ ಚಿನ್ನದ ಗಟ್ಟಿ ಮತ್ತು 1.17ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಜೂ.6ರಂದು ಮಧ್ಯಾಹ್ನ ಶಿರ್ವ ಪೇಟೆಯ ಕೃಪಾ ಜ್ಯುವೆಲ್ಲರ್ಸ್‌ಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಅಪರಿಚಿತರು, ಅಂಗಡಿಯ ಕೆಲಸದವರಿಗೆ ತಿಳಿಯದಂತೆ 1.49 ಲಕ್ಷ ರೂ. ಮೌಲ್ಯದ 28,799 ಗ್ರಾಂ ತೂಕದ ಚಿನ್ನದ ನೆಕ್ಸಸ್ ಕಳವು ಮಾಡಿಕೊಂಡು ಹೋಗಿದರು.

    ಜೂ.9ರಂದು ಸಿಸಿ ಕ್ಯಾಮೆರಾ ಪರಿಶೀಲಿಸಿ ದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿತ್ತು. ಈ ಬಗ್ಗೆ, ವಿವೇಕಾನಂದ ಆಚಾರ್ಯ ನೀಡಿದ ದೂರಿನಂತೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಆರೋಪಿಗಳ ವಿರುದ್ಧ ಮೂಡಬಿದ್ರಿಯ ಪೊಲೀಸ್ ಠಾಣೆಯಲ್ಲೂ ಪುಕರಣ ದಾಖಲಾಗಿತ್ತು.ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಡುಪಿ ಎಸ್ಸಿ ಅಕ್ಷಯ್ ಹಾಗೇ, ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ಕಾರ್ಕಳ ಡಿವೈಎಸ್ಪಿ, ವಿಜಯ್‌ ಪುಸಾದ್ ಮಾರ್ಗದರ್ಶನದಲ್ಲಿ, ಕಾಪು ವೃತ್ತ ನಿರೀಕ್ಷಕ ಪೂವಯ್ಯ, ಕೆ.ಸಿ. ನೇತೃತ್ವದಲ್ಲಿ ಶಿರ್ವ ಎಸ್ಟ್, ರಾಘವೇಂದ್ರ ಸಿ., ಎಎಸ್ಸಿ ವಿವೇಕಾನಂದ ಬಿ., ಸಿಬ್ಬಂದಿಗಳಾದ ಕಿಶೋರ್ ಕುಮಾರ್, ರಘು, ಅಖಿಲ್, ಶಿವಾನಂದ ಪೂಜಾರಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss