ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ ಕರ್ಕೇರ, ಲ. ಸ್ವರೂಪ ಎನ್. ಶೆಟ್ಟಿ, ಲ. ತಾರನಾಥ ಶೆಟ್ಟಿ ಬೋಳಾರ್, ನವೀನ್ ಶೆಟ್ಟಿ ಅಳಕೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.
“ಇದೇ ಸಂದರ್ಭದಲ್ಲಿ ತ್ರಿರಂಗ ಸಂಗಮ ಮುಂಬೈ ಇದರ ಸಂಚಾಲಕರಾದ ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ, ಕರ್ನೂರು ಮೋಹನ್ ರೈ ಅವರನ್ನು ಸನ್ಮಾನಿಸಲಾಗುವುದು” ಎಂದು ಕದ್ರಿ ನವನೀತ್ ಶೆಟ್ಟಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಲಯನ್ ಡಿ.ಕಿಶೋರ್ ಶೆಟ್ಟಿ, ನಾಟಕ ರಚನೆಕಾರ ಜೀವನ್ ಉಳ್ಳಾಲ್, ಮೋಹನ್ ಕೊಪ್ಪಲ, ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಯಾದವ ಮಣ್ಣಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
Trending
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಕಚೇರಿಯಲ್ಲಿ ಶಶಿ ಬಂಡಿಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ, ಶಶಿ ಬಂಡಿಮಾರ್ ರವರ ಕನಸು ನನಾಸಾಗಿಸಲು ಪ್ರಯತ್ನಿಸಿ – ಡಾ ಆಕಾಶ್ ರಾಜ್ ಜೈನ್
- ಫೆಬ್ರವರಿ 12 ರಂದು ಸುಳ್ಯ ತಾಲೂಕು ಕಛೇರಿ, ಸುಳ್ಯ ದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”
- ಪತ್ರಕರ್ತ ಶಶಿ ಬಂಡಿಮಾರ್ ರಿಗೆ ತುಳು ಸಂಘಟನೆಗಳಿಂದ ಶ್ರದ್ಧಾಂಜಲಿ, ತುಳುವಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪ್ರಾಮಾಣಿಕ ವ್ಯಕ್ತಿ ಶಶಿ ಬಂಡಿಮಾರ್ : ತಾರಾನಾಥ ಗಟ್ಟಿ
- ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ