ಇರಾನ್ನಲ್ಲಿ ನಡೆಯುತ್ತಿರುವ ನಿರಂತರ ಯುದ್ಧದಿಂದ ಉಡುಪಿ ಜಿಲ್ಲೆಯಲ್ಲಿಯೂ ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರಿನ ಸಮಸ್ಯೆ ಉಲ್ಬಣಿಸುತ್ತಿದೆ. ಸಾಮಾನ್ಯ ಜನರ ಜೀವನಕ್ಕೂ ಇದರ ಬಿಸಿ ತಟ್ಟುತ್ತಿದೆ. ಈವರೆಗೆ ಗೃಹ ಬಳಕೆಯ ಸಿಲಿಂಡರ್ ಆದರೂ ಸಿಗುತ್ತಿತ್ತು. ಈಗ ಅದರ ಲಭ್ಯತೆಯು ಇಲ್ಲದಂತಾಗಿ ಜನಸಾಮಾನ್ಯರಿಗೂ ಸಹ ಅಡುಗೆ ಮಾಡಲಾಗದೆ ಪರಿತಪಿಸುವಂತಾಗಿದೆ. ಸಣ್ಣ ಹೋಟೆಲ್ಗಳು, ದೊಡ್ಡ ಹೋಟೆಲ್ಗಳು, ಲಾಡ್ಜ್ಗಳು, ಸ್ವಂತ ಮನೆಯಲ್ಲಿ ವಾಸಿಸುವವರು, ಬಾಡಿಗೆ ಮನೆಯಲ್ಲಿರುವ ಜನಸಾಮಾನ್ಯರು ಎಂಬ ತಾರತಮ್ಯವಿಲ್ಲದೇ ಎಲ್ಲರೂ ಸಹ ಸಿಲಿಂಡರಿನ ಸಮಸ್ಯೆಗೆ ಸಿಲುಕಿದ್ದಾರೆ. ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ವರ್ಷವೂ ಈ ಸಂದರ್ಭದಲ್ಲಿ ಧಾರ್ಮಿಕ ಉತ್ಸವ, ವಿವಾಹ ಮುಂತಾದ ಸಮಾರಂಭ ನಡೆಯುವ ಕಾಲವಾಗಿದ್ದು, ಈಗ ಅದಕ್ಕೂ ಅನಿಲ ಪೂರೈಕೆಯ ಸಮಸ್ಯೆಯಾಗಿದ್ದು, ಸಾರ್ವಜನಿಕರಿಗೆ ಯಾವುದೇ ಸಭೆ ಸಮಾರಂಭವವನ್ನು ನಡೆಸಲಾಗದೆ ಸಿಲಿಂಡರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಗಮನಹರಿಸಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ವಿನಂತಿ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

